Wednesday, April 23, 2025
Wednesday, April 23, 2025

Marathon Running ಜನವರಿ 13 ಶಿವಮೊಗ್ಗದಲ್ಲಿ ಮ್ಯಾರಥಾನ್ ಓಟ

Date:

Marathon Running ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಇಲ್ಲಿನ ನ್ಯಾಶನಲ್ ಪಬ್ಲಿಕ್ ಶಾಲೆಯಿಂದ ಇದೇ ಜನವರಿ 13ರಂದು ‘ರನ್ ಫಾರ್ ಯೂತ್-ಯೂತ್ ಫಾರ್ ನೇಷನ್-ನೇಷನ್ ಫಾರ್ ಯೂತ್’ ಎಂಬ ಘೋಷಣೆಯೊಂದಿಗೆ ಮ್ಯಾರಥಾನ್ ಓಟ ಏರ್ಪಡಿಸಲಾಗಿದೆ ಎಂದು ನ್ಯಾಷನಲ್ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಬಿ.ಜಿ. ಧನಲಕ್ಷ್ಮೀ ತಿಳಿಸಿದರು.

ಶಾಲೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಘಟಕವಾದ ನ್ಯಾಷನಲ್ ಪಬ್ಲಿಕ್ ಶಾಲೆ ಮತ್ತು ಡೆಕಾಥ್ಲಾನ್, ಶಿವಮೊಗ್ಗ ಇವರ ಸಹಭಾಗಿತ್ವದಲ್ಲಿ ಈ ಮ್ಯಾರಥಾನ್ ಓಟ ಏರ್ಪಡಿಸಲಾಗಿದ್ದು, ಸುಮಾರು 1000 ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದು ನಗರದ ಜನಮನ ಸೆಳೆಯುವುದರೊಂದಿಗೆ ಸ್ವಾಮಿ ವಿವೇಕಾನಂದರ ಸಂದೇಶವನ್ನು ಸಾರುವುದರಲ್ಲಿ ಸಾರ್ಥಕತೆಯನ್ನು ಮೆರೆಯಲಿದೆ ಎಂದರು.

ಅoದು ಬೆಳಗ್ಗೆ 6ಗಂಟೆಗೆ ಶಾಲಾ ಆವರಣ ದಿಂದ ಪ್ರಾರಂಭವಾಗುವ ಮ್ಯಾರಥಾನ್ ನಗರದ ಸಂಗೊಳ್ಳಿರಾಯಣ್ಣ ವೃತ್ತ, ಶಂಕರಮಠ ರಸ್ತೆ, ಎ.ಎ.ಸರ್ಕಲ್, ಸಿಟಿ ಸೆಂಟರ್ ಮಾಲ್, ಗೋಪಿ ಸರ್ಕಲ್, ಮಹಾವೀರ ವೃತ್ತ (ಕೋರ್ಟ್ ಸರ್ಕಲ್), ಕೆ.ಇ.ಬಿ ಸರ್ಕಲ್‌ನಿಂದ ಪುನಃ ಶಾಲಾ ಆವರಣ ಹೀಗೆ ಸುಮಾರು 5 ಕಿ.ಮೀ ದೂರವನ್ನು ಕ್ರಮಿಸಲಿದೆ ಎಂದ ಅವರು, ವಿದ್ಯಾರ್ಥಿಗಳು ಓಡಿ ದಣಿಯದೆ ನಡೆದು ಬಳಲದೆ ಉತ್ಸುಕರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Marathon Running ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನ್ಯಾಷನಲ್ ಪಬ್ಲಿಕ್, ಶಾಲೆಯ ಪ್ರಾಂಶುಪಾಲೆ ಶ್ರೀಮತಿ ನವೀನ ಎಂ. ಪಾಯ್ಸ್ ಹಾಗೂ ಉಪಪ್ರಾಂಶುಪಾಲ ರಂಗನಾಥ ಮತ್ತು ಡೆಕಾಥ್ಲಾನ್ ವ್ಯವಸ್ಥಾಪಕ ಅಮೃತ್ ಇವರ ನಾಯಕತ್ವದಲ್ಲಿ ಮ್ಯಾರಥಾನ್ ಓಟ ನಡೆಯಲಿದ್ದು, ಈ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಸಂಯೋಜಕರಾದ ಪದ್ಮಿನಿ, ಜಯಮಾಲಾ, ಸೌಮ್ಯ ಎಂ.ಡಿ., ಜಯಂತಿ, ಶಿಕ್ಷಕಿ ಗೀತಾ ಸಿ., ವಿದ್ಯಾರ್ಥಿಗಳಾದ ಕೃತಿಕಾ, ನಿಶ್ಚಯ್ ಎಂ.ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....