Monday, May 4, 2026
Monday, May 4, 2026

Bhadra Reservoir ಆನ್ ಅಂಡ್ ಆಫ್ ಪದ್ಧತಿಯಲ್ಲಿ ಭದ್ರಾ ಬಲದಂಡೆ ನಾಲೆ ಜ.15 & ಜ,10 ರಿಂದ ಎಡದಂಡೆ ನಾಲೆಗಳಲ್ಲಿ ನೀರಿನ ಹರಿವು

Date:

Bhadra Reservoir 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ದಿ:15-01-2024 ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ದಿ: 10.01.2024 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.

ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಮದ 25 ರವರೆಗೆ 16 ದಿನ ನೀರು ಹರಿಸುವುದು, ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು. ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು. ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.

ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು. ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು. ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು.

Bhadra Reservoir ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...