Sunday, August 2, 2026
Sunday, August 2, 2026

Bhadra Reservoir ಆನ್ ಅಂಡ್ ಆಫ್ ಪದ್ಧತಿಯಲ್ಲಿ ಭದ್ರಾ ಬಲದಂಡೆ ನಾಲೆ ಜ.15 & ಜ,10 ರಿಂದ ಎಡದಂಡೆ ನಾಲೆಗಳಲ್ಲಿ ನೀರಿನ ಹರಿವು

Date:

Bhadra Reservoir 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ಬಲದಂಡೆ ನಾಲೆಗೆ ದಿ:15-01-2024 ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ದಿ: 10.01.2024 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.

ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಮದ 25 ರವರೆಗೆ 16 ದಿನ ನೀರು ಹರಿಸುವುದು, ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು. ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು. ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.

ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು. ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು. ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು.

Bhadra Reservoir ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...