Sunday, August 2, 2026
Sunday, August 2, 2026

Yuva Nidhi ಯುವನಿಧಿ ಚಾಲನೆಗೆ ಮುನ್ನ ಯುವಜನತೆಯನ್ನ ರಂಜಿಸಿದ ಗಾನಮಂಜರಿ

Date:

Yuva Nidhi ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ‘ಯುವನಿಧಿ’ ಯೋಜನೆಯ ನೇರ ನಗದು ವರ್ಗಾವಣೆ ಬೃಹತ್ ಕಾರ್ಯಕ್ರಮದ ವೇದಿಕೆಗೆ ಗಣ್ಯರು ಆಗಮಿಸುವ ಮುನ್ನ ನಾಡಿನ ಹೆಸರಾಂತ ಸಂಗೀತಗಾರರು ನಡೆಸಿಕೊಟ್ಟ ತತ್ವಪದ,ಜನಪ್ರಿಯ ಚಿತ್ರಗೀತೆಗಳಿಗೆ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವಕ-ಯುವತಿಯರು ಲಯಬದ್ಧವಾಗಿ ಹೆಜ್ಜೆ ಹಾಕಿದ್ದು ಕಾರ್ಯಕ್ರಮದ ಸಂತಸ,ಸಂಭ್ರಮಗಳನ್ನು ನೂರ್ಮಡಿಗೊಳಿಸಿತು.

ಸಂತ ಶಿಶುನಾಳ ಶರೀಫರ ‘ಕೋಡಗನ್ನ ಕೋಳಿ ನುಂಗಿತ್ತ’ ,”ತರವಲ್ಲ ತಗೀ ನಿನ್ನ ತಂಬೂರಿ ಸ್ವರ” ತತ್ವಪದಗಳು ಅಜಯ್ ವಾರಿಯರ್ ಮತ್ತು ತಂಡದವರಿಂದ ಅನುರಣಿಸಿದವು, ಸಂತೋಷದೇವ್ ಅವರು ಹಾಡಿದ “ಬೆಳ್ಳಿ ಮೂಡಿತೋ ಕೋಳಿ ಕೂಗಿತೋ” ಡಾ.ರಾಜ್ ಅಭಿನಯದ ಗೀತೆಗೆ ನೆರೆದ ಜನ ಕುಣಿದು ಕುಪ್ಪಳಿಸಿತು, ಅನುರಾಧಭಟ್ ಅವರು “ಅಪ್ಪ ಐ ಲವ್ ಯೂ” , “ಕಣ್ಣು ಹೊಡಿಯಾಕ ಮೊನ್ನೆ ಕಲತನೀ….” ಹಾಡುಗಳು ಕೇಳುಗರ ಮನಗೆದ್ದವು.ಸಮೂಹ ವೃಂದಗಾನದಲ್ಲಿ ಮೂಡಿ ಬಂದ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಹಾಡು ಸಭಾಮಂಟಪದಲ್ಲಿ ಸಂಚಲನ ಉಂಟು ಮಾಡಿತು.”ಗೊಂಬೆ ಹೇಳುತೈತೆ ಮತ್ತೆ ಹೇಳುತೈತೇ ನೀನೆ ರಾಜಕುಮಾರ” ಗೀತೆಯು ಯುವಸಮೂಹವನ್ನು ಭಾವಪರವಶರನ್ನಾಗಿಸಿತು.ಸಾವಿರಾರು ಯುವಜನರು ತಮ್ಮ ಮೊಬೈಲ್‌ಗಳ ಟಾರ್ಚ್ ಬೆಳಗಿ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ಸಮಾರಂಭದಿಂದಲೇ ಗೌರವ ಸೂಚಿಸಿದ್ದು ವಿಶೇಷವಾಗಿತ್ತು.

Yuva Nidhi ಡಾ.ಅನೀಶ್ ವಿದ್ಯಾಶಂಕರ್ ಅವರು ವಯೋಲಿನ್‌ನಲ್ಲಿ ಕನ್ನಡ ಚಿತ್ರಗೀತೆಗಳ ನಾದಸುಧೆ ಹರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...