Freedom Park Old Shimoga Jail ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು. ಇದು ಶಿವಮೊಗ್ಗ ಜಿಲ್ಲೆಯ ಜನತೆಗೆ Freedom Park Old Shimoga Jail ಹಾಗೂ ಬಸವ ತತ್ವ ಅಭಿಮಾನಿಗಳಿಗೆ ಅಪಾರ ಸಂತೋಷ ಉಂಟುಮಾಡಿದೆ. ಜಿಲ್ಲೆಯ ನಾಗರಿಕರ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.
Freedom Park Old Shimoga Jail ಫ್ರೀಡಂ ಪಾರ್ಕಿಗೆಅಲ್ಲಮ ಪ್ರಭು ಹೆಸರಿಡಲು ಸಿದ್ಧರಾಮಯ್ಯ ಸಲಹೆ
Date: