Friday, March 20, 2026
Friday, March 20, 2026

Sports News ವಿಶೇಷ ಚೇತನರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಿಂಚಿದ ಪ್ರತಿಭೆ ಟಿ.ಎಲ್.ರೋಹಿಣಿ

Date:

Sports News ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ,ಶಿವಮೊಗ್ಗ ಇವರ ಸಂಯುಕ್ತ ಆಶಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ತಮ್ಮಡಿಹಳ್ಳಿ,ಸರ್ಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ಕ್ರೀಡಾಪಟುವಾದ ರೋಹಿಣಿ ಟಿ.ಎಲ್.ಗುಂಡು ಎಸೆತ, ಜಾವಲಿನ್ ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಗುಂಡು ಎಸೆತದಲ್ಲಿ ದ್ವಿತೀಯ, ಜಾವಲಿನ್ ನಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿರುತ್ತಾಳೆ.

ಈ ಪ್ರತಿಭೆಯು ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತರಾಗಿರುತ್ತಾಳೆ. ಲೋಕೇಶ್ ಮತ್ತು ಸವಿತಾ ದಂಪತಿಗಳ ಪುತ್ರಿಯಾಗಿರುತ್ತಾಳೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಕಾಳನಾಯ್ಕ ಅವರಲ್ಲಿ ತರಬೇತಿಯನ್ನು ಪಡೆಯುತ್ತಿರುವುದು ಮತ್ತೊಂದು ವಿಶೇಷ.

Sports News ರಾಜ್ಯಮಟ್ಟದ ವಿಶೇಷ ಚೇತನ ಅಥ್ಲೆಟಿಕ್ಸ್ ಕ್ರೀಡಾಕೂಟವು ಮಧುಗಿರಿ ಜಿಲ್ಲೆಯಲ್ಲಿ 17 ರಿಂದ 19 ವರೆಗೆ ನಡೆಯಲಿದೆ. ಅಲ್ಲಿಯೂ ಸಹ ಉತ್ತಮ ಆಟದ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗುವಂತಹ ಅರ್ಹತೆಯನ್ನು ಪಡೆಯಲಿ ಎಂದು ನಮ್ಮೆಲ್ಲರ ಆಶಯ.

ಕ್ರೀಡಾ ಪ್ರತಿಭೆಯ ಮುಂದಿನ ಕ್ರೀಡಾ ಜೀವನ ಯಶಸ್ವಿ ಯಾಗಲೆಂದು ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದದವರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರು , ತಮ್ಮಡಿಹಳ್ಳಿ ಗ್ರಾಮದ ನಾಗರೀಕರು, ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...