Friday, September 27, 2024
Friday, September 27, 2024

Sports News ವಿಶೇಷ ಚೇತನರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಿಂಚಿದ ಪ್ರತಿಭೆ ಟಿ.ಎಲ್.ರೋಹಿಣಿ

Date:

Sports News ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ,ಶಿವಮೊಗ್ಗ ಇವರ ಸಂಯುಕ್ತ ಆಶಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿಶೇಷ ಚೇತನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ತಮ್ಮಡಿಹಳ್ಳಿ,ಸರ್ಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ಕ್ರೀಡಾಪಟುವಾದ ರೋಹಿಣಿ ಟಿ.ಎಲ್.ಗುಂಡು ಎಸೆತ, ಜಾವಲಿನ್ ನಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ಗುಂಡು ಎಸೆತದಲ್ಲಿ ದ್ವಿತೀಯ, ಜಾವಲಿನ್ ನಲ್ಲಿ ಪ್ರಥಮ ಸ್ಥಾನ ಪಡೆದು, ಜಿಲ್ಲೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿರುತ್ತಾಳೆ.

ಈ ಪ್ರತಿಭೆಯು ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತರಾಗಿರುತ್ತಾಳೆ. ಲೋಕೇಶ್ ಮತ್ತು ಸವಿತಾ ದಂಪತಿಗಳ ಪುತ್ರಿಯಾಗಿರುತ್ತಾಳೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಕಾಳನಾಯ್ಕ ಅವರಲ್ಲಿ ತರಬೇತಿಯನ್ನು ಪಡೆಯುತ್ತಿರುವುದು ಮತ್ತೊಂದು ವಿಶೇಷ.

Sports News ರಾಜ್ಯಮಟ್ಟದ ವಿಶೇಷ ಚೇತನ ಅಥ್ಲೆಟಿಕ್ಸ್ ಕ್ರೀಡಾಕೂಟವು ಮಧುಗಿರಿ ಜಿಲ್ಲೆಯಲ್ಲಿ 17 ರಿಂದ 19 ವರೆಗೆ ನಡೆಯಲಿದೆ. ಅಲ್ಲಿಯೂ ಸಹ ಉತ್ತಮ ಆಟದ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗುವಂತಹ ಅರ್ಹತೆಯನ್ನು ಪಡೆಯಲಿ ಎಂದು ನಮ್ಮೆಲ್ಲರ ಆಶಯ.

ಕ್ರೀಡಾ ಪ್ರತಿಭೆಯ ಮುಂದಿನ ಕ್ರೀಡಾ ಜೀವನ ಯಶಸ್ವಿ ಯಾಗಲೆಂದು ಮುಖ್ಯ ಶಿಕ್ಷಕರು, ಅಧ್ಯಾಪಕ ವೃಂದದವರು ಹಾಗೂ ಎಸ್.ಡಿ.ಎಂ.ಸಿ ಸದಸ್ಯರು , ತಮ್ಮಡಿಹಳ್ಳಿ ಗ್ರಾಮದ ನಾಗರೀಕರು, ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...