Thursday, March 19, 2026
Thursday, March 19, 2026

BJP Shivamogga ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ

Date:

BJP Shivamogga ಕಳೆದ ಅವಧಿಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಸಂಘಟನಾ ಶಕ್ತಿಯನ್ನು ವೃದ್ಧಿಸಿ ಬೂತ್‌ ಮಟ್ಟದವರೆಗೂ ಪ್ರವಾಸ ಮಾಡಿ ಶಿವಮೊಗ್ಗ ಜಿಲ್ಲೆಯ ಸಾಮಾಜಿಕ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಸಂಘಟನಾಕ ಹೋರಾಟಗಳನ್ನು ನಡೆಸಿದ್ದಾರೆ. ಹಾಗೂ ಜಿಲ್ಲೆಯ ಬಿಜೆಪಿಯ ವಿವಿಧ ಸ್ಥರದ ಜನಪತ್ರಿನಿಧಿಗಳೊಂದಿಗೆ ಅತ್ಯಂತ ಯಶಸ್ವಿಯಾಗಿ ಸಮನ್ವಯವನ್ನು ರೂಪಿಸಿದ ಸಾಗರದ ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀ ಟಿ.ಡಿ ಮೇಘರಾಜ್ ಅವರನ್ನು ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧ್ಯಕ್ಷರಾನ್ನಾಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ, ಈ ಹಿಂದೆ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ವಿವಿಧ
ಜಿಲ್ಲೆಯ ಜವಾಬ್ದಾರಿಗಳನ್ನು ನಿರ್ವಹಿಸಿ ರಾಜ್ಯ ರೈತಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಎಸ್.ದತ್ತಾತ್ರಿ ಯವರನ್ನು ಬಿಜೆಪಿಯ ರಾಜ್ಯ ಪ್ರಕೋಷ್ಠಗಳ ಸಂಯೋಜಕರನ್ನಾಗಿ ಆಯ್ಕೆ ಮಾಡಲಾಗಿದೆ.

BJP Shivamogga ಇವರುಗಳನ್ನು ನಿಯುಕ್ತಿಗೊಳಿಸಿದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ ರವರಿಗೆ ಜಿಲ್ಲಾ ಬಿಜೆಪಿವತಿಯಿಂದ ಹೃತಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...