Sunday, August 2, 2026
Sunday, August 2, 2026

DVS College of Arts and Science ರಸ್ತೆ ಸುರಕ್ಷತಾ ನಿಯಮಗಳನ್ನ ಪಾಲಿಸುವುದು ನಮ್ಮ ಜವಾಬ್ದಾರಿ-ಎಸ್. ರಾಜಶೇಖರ್

Date:

DVS College of Arts and Science

ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಮಾಡದಿರುವುದು ಅಪಘಾತ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣ. ಪ್ರತಿಯೊಬ್ಬ ವಾಹನ ಬಳಕೆದಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲಿಸಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸುಬ್ಬಯ್ಯ ದಂತ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ “ಅಘಾತ ಜಾಗೃತಿ ಅಭಿಯಾನ” ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಹನ ಚಾಲನಾ ಪರವಾನಗಿ ಹೊಂದುವುದು ಮೊದಲ ಕರ್ತವ್ಯ. ಬೈಕ್ ಓಡಿಸುವಾಗ ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಕಾರು ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸಬೇಕು. ನಿಯಮಾನುಸಾರ ವೇಗದಲ್ಲಿ ವಾಹನ ಓಡಿಸಬೇಕು. ಎಲ್ಲ ರಸ್ತೆ ಸುರಕ್ಷತಾ ನಿಯಮಗಳು ಪಾಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಮಾತನಾಡಿ, ಮಕ್ಕಳು ಜವಾಬ್ದಾರಿಯುತವಾಗಿ ಜೀವನ ನಡೆಸಬೇಕು ಎನ್ನುವುದು ಪಾಲಕರ ಕನಸು. ಆದರೆ ಯುವಜನರು ನಿರ್ಲಕ್ಷ್ಯ ವಹಿಸಿ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇದರಿಂದ ಪಾಲಕರು ತುಂಬಾ ನೋವು ಅನುಭವಿಸುತ್ತಾರೆ. ಯುವಜನರು ಜಾಗೃತಿ ವಹಿಸಿ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಸುಬ್ಬಯ್ಯ ದಂತ ವಿಜ್ಞಾನಗಳ ಸಂಸ್ಥೆಯ ವೈದ್ಯ ಡಾ. ಪ್ರಮೋದಕೃಷ್ಣ.ಬಿ ಅವರು ರಸ್ತೆ ಅಪಾಘತ ಮತ್ತು ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಸ್ವಾಗತ ಭಾಷಣ ಮಾಡಿದರು.
DVS College of Arts and Science ದೇಶಿಯ ವಿದ್ಯಾಶಾಲಾ ಸಮಿತಿಯ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಕೇತನಾ ಆರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರುದ್ರೇಶ್.ಸಿ.ಇ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...