Saturday, December 6, 2025
Saturday, December 6, 2025

Siddaramaiah ಅಂಬಿಗ ಸಮುದಾಯವನ್ನ ಪರಿಶಿಷ್ಟ ಪಂಗಡ ಸೇರ್ಪಡೆಗೆ ಎರಡು ಬಾರಿ ಶಿಫಾರಸು- ಸಿದ್ಧರಾಮಯ್ಯ

Date:

Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಇಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು.
ನಂತರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕ್ರಮ ವಹಿಸಬೇಕು. 96-97 ರಲ್ಲಿಯೇ ಶಾಸಕರಾದ ದಿವಂಗತ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು.

ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು. ಈ ಸಾಲಿನಲ್ಲಿ ಅಂಬಿಗರ ಚೌಡಯ್ಯ ಮೊದಲನೇ ಸಾಲಿನಲ್ಲಿ ನಿಲ್ಲುತ್ತಾರೆ. ಅದಕ್ಕೆ ಬಸವಣ್ಣನವರು ಇವರಿಗೆ ನಿಜಶರಣ ಎಂದು ಕರೆದರು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರಲ್ಲೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ.

ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೊಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು.

Siddaramaiah ಅಂಬಿಗರ ಚೌಡಯ್ಯನವರ ಹಾದಿಯಲ್ಲಿ ನಡೆಯುವುದು ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ. ಅವರ ವಿಚಾರಗಳನ್ನು ಜನರಿಗೆ ತಿಳಿಸಲು ಜಯಂತ್ಯೋತ್ಸವವನ್ನು ಆಚರಿಸಲಾಗುತ್ತದೆ.
ನಮ್ಮ ಮಕ್ಕಳು ಯಾವ ಕಾರಣದಿಂದಲೂ ವಿದ್ಯೆಯಿಂದ ವಂಚಿತರಾಗಬಾರದು. ಸಮಾಜದ ಅಸಮಾನತೆಯನ್ನು ಹೋಗಲಾಡಿಸಬೇಕು. ಪಟ್ಟಭದ್ರ ಹಿತಾಸಕ್ತಿಯ ವಿರುದ್ಧ ನಿಲ್ಲಬೇಕಾಗುತ್ತದೆ. ಬದಲಾವಣೆ ಬಯಸದ ಜನ ಆಗಲೂ ಇದ್ದರು, ಈಗಲೂ ಇದ್ದಾರೆ. ನಾನು ಹಿಂದುಳಿದ ಸಮಾಜದೊಂದಿಗೆ ಸದಾ ಇರುತ್ತೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...