Thursday, August 13, 2026
Thursday, August 13, 2026

Rangayana Shivamogga ನಗರದ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ರಂಗಗೀತೆಗಳ ಕಾರ್ಯಾಗಾರ

Date:

Rangayana Shivamogga ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ದಿನಾಂಕ:18.01.2024 ರಂದು ಗುರುವಾರ ಬೆಳಿಗ್ಗೆ 9.00 ರಿಂದ ಸಂಜೆ 7.00 ಗಂಟೆಯವರೆಗೆ ಶಿವಮೊಗ್ಗ ನಗರದ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಂಗಗೀತೆಗಳ ಮೂಲಕ ರಂಗಭೂಮಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ‘ಒಂದು ದಿನದ ರಂಗಗೀತೆಗಳ ತರಬೇತಿ ಕಾರ್ಯಾಗಾರ’ವನ್ನು ರಂಗಾಯಣ, ಸುವರ್ಣ ಸಾಂಸ್ಕೃತಿಕ ಭವನ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ ಇಲ್ಲಿ ಆಯೋಜಿಸಿದೆ.

ಈ ಕಾರ್ಯಾಗಾರವನ್ನು ಬೆಳಿಗ್ಗೆ 9.00 ಗಂಟೆಗೆ ಉಸ್ತಾದ್ ಹುಮಾಯೂನ್ ಹರ್ಲಾಪುರ್, ಹಿಂದೂಸ್ತಾನಿ ಗಾಯಕರು, ಶಿವಮೊಗ್ಗ ಇವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಾ.ಹೆಚ್.ಎಸ್.ನಾಗಭೂಷಣ್, ಪ್ರಾಂಶುಪಾಲರು, ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜು, ಶಿವಮೊಗ್ಗ ಇವರು ಭಾಗವಹಿಸಲಿದ್ದಾರೆ.

Rangayana Shivamogga ಈ ಕಾರ್ಯಾಗಾರದಲ್ಲಿ ಕಲಿತ ರಂಗಗೀತೆಗಳನ್ನು ಅದೇ ದಿನ ಸಂಜೆ 5.30 ರಿಂದ 7.00 ಗಂಟೆಯವರೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ಪ್ರಸ್ತುತಪಡಿಸಲಾಗುವುದು. ಈ ಸಮಾರೋಪ ಸಮಾರಂಭದಲ್ಲಿ ಶ್ರೀಮತಿ ವಿಜಯಲಕ್ಷ್ಮಿ, ಹಿರಿಯ ರಂಗಕರ್ಮಿಗಳು, ಶಿವಮೊಗ್ಗ ಇವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಡಾ.ಎಮ್. ವೆಂಕಟೇಶ್, ಪ್ರಾಂಶುಪಾಲರು, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಶಿವಮೊಗ್ಗ ಇವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಹಾಲಸ್ವಾಮಿ ಆರ್.ಎಸ್., ಕಾರ್ಯಾಗಾರದ ಸಂಚಾಲಕರು, ರಂಗಸಮಾಜದ ಮಾಜಿ ಸದಸ್ಯರು ಇವರ ಉಪಸ್ಥಿತಿ ಇರುತ್ತದೆ ಹಾಗೂ ಡಾ.ಶೈಲಜಾ ಎ.ಸಿ., ಆಡಳಿತಾಧಿಕಾರಿಗಳು, ರಂಗಾಯಣ, ಶಿವಮೊಗ್ಗ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಾಗಾರದ ಸಮಾರೋಪ ಸಮಾರಂಭಕ್ಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಆಸಕ್ತರು ಸಂಜೆ 5.30 ರಿಂದ 7.00 ರವರೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...