Friday, June 26, 2026
Friday, June 26, 2026

HDFC-ERGO ಎಚ್ಡಿಎಫ್ಸಿ-ಇಆರ್ಜಿಓ ಜನರಲ್ ಇನ್ಷೂರೆನ್ಸ್ ಕಂಪೆನಿ ವಿರುದ್ಧ ಗ್ರಾಹಕರೊಬ್ಬರಿಗೆ ನ್ಯಾಯ ವಿಜಯ

Date:

HDFC-ERGO ಅರ್ಜಿದಾರರಾದ ಸಿ.ಡಿ ರವಿರಾಜ್ ಇವರು ಹೆಚ್‍ಡಿಎಫ್‍ಸಿ-ಇಆರ್‍ಜಿಓ ಜನರಲ್ ಇನ್ಶೂರೆನ್ಸ್ ಕಂ.ಲಿ ಮುಂಬೈ ಮತ್ತು ಶಿವಮೊಗ್ಗ ವಿರುದ್ದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ದಾಖಲಿಸಿದ್ದ ಪ್ರಕರಣದಲ್ಲಿ ಅರ್ಜಿದಾರರಿಗೆ ವಿಮಾ ಮೊತ್ತ ನೀಡುವಂತೆ ಆಯೋಗದ ಪೀಠ ಆದೇಶಿಸಿದೆ.

ಅರ್ಜಿದಾರರು ಬಿಎಎಂಎಸ್ ವೈದ್ಯರಾಗಿದ್ದು ಹೆಚ್‍ಡಿಎಫ್‍ಸಿ-ಇಆರ್‍ಜಿಓ ಜನರಲ್ ಇನ್ಶೂರೆನ್ಸ್ ಕಂ.ಲಿ ಇವರಿಂದ ರೂ.6,00,000 ಪರಿಹಾರ ಮೊತ್ತವನ್ನು ಒಳಗೊಂಡ ಹೆಲ್ತ್ ಇನ್ಶೂರೆನ್ಸ್ ಪಾಲಿಸಿಯನ್ನು 2021 ರಲ್ಲಿ ಪಡೆದಿರುತ್ತಾರೆ.

ಅರ್ಜಿದಾರರು ದಿ: 02-08-2021 ರಂದು ಕೋವಿಡ್-19 ಗೆ ಒಳಗಾಗಿ ಹಲವು ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಚಿಕಿತ್ಸೆ ಒಟ್ಟು ಖರ್ಚು ರೂ.4,08,564 ಗಳಾಗಿದ್ದು ಚಿಕಿತ್ಸೆ ನಂತರ ಅರ್ಜಿದಾರರು ವಿಮಾ ಕಂಪೆನಿಯವರಲ್ಲಿ ವೈದ್ಯಕೀಯ ವೆಚ್ಚದ ಮರುಪಾವತಿ ಅರ್ಜಿ ಸಲ್ಲಿಸಿದಾಗ ಎದುರುದಾರರು ನಕಲಿ ದಾಖಲೆ ಸೃಷ್ಟಿಸಿ ತಪ್ಪಾಗಿ ನಿರೂಪಿಸದ್ದಾರೆಂದು ತಿಳಿಸಿ, ವಿಮಾ ಪರಿಹಾರ ನೀಡಲು ನಿರಾಕರಿಸಿದ್ದಲ್ಲದೆ, ವಿಮಾ ಪಾಲಿಸಿಯನ್ನು ಕೂಡ ರದ್ದು ಪಡಿಸಿರುತ್ತಾರೆ.

HDFC-ERGO ಗ್ರಾಹಕರ ಆಯೋಗವು ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಪಕ್ಷಗಾರರು ಹಾಜರುಪಡಿಸಿದ ಎಲ್ಲ ದಾಖಲೆಗಳನ್ನು, ಚಿಕಿತ್ಸೆ ಪಡೆದಂತಹ ವೈದ್ಯಕೀಯ ದಾಖಲೆಗಳನ್ನು ಅವಲಂಬಿಸಿ, ಎದುರುದಾರ ವಿಮಾಕಂಪೆನಿ ನಿರಾಕರಣೆಯು ಸೇವಾನ್ಯೂನ್ಯತೆಯಿಂದ ಕೂಡಿರುತ್ತದೆ ಎಂದು ತೀರ್ಮಾನಿಸಿ ಪ್ರಕರಣವನ್ನು ಭಾಗಶಃ ಪುರಸ್ಕರಿಸುತ್ತದೆ.

ವಿಮಾ ಕಂಪೆನಿಯು ಈ ಆದೇಶವಾದ 45 ದಿನಗಳೊಳಗಾಗಿ ಅರ್ಜಿದಾರರು ಪಡೆದಿದ್ದ ಪಾಲಿಸಿಯನ್ನು ಪುನರುಜ್ಜೀವಗೊಳಿಸಬೇಕು ಹಾಗೂ ವಿಮಾ ಪರಿಹಾರ ಮೊತ್ತ ರೂ.4,08,165 ನ್ನು ವಾರ್ಷಿಕ ಬಡ್ಡಿ ಶೇ.9 ಸಮೇತ ಪಾವತಿಸತಕ್ಕದ್ದು ಮತ್ತು ರೂ.25,000 ಗಳನ್ನು ಮಾನಸಿಕ ಹಾನಿಗೆ ಪರಿಹಾರವಾಗಿ, ರೂ.10,000 ಗಳನ್ನು ವ್ಯಾಜ್ಯದ ಖರ್ಚು ವೆಚ್ಚಗಳ ಬಾಬ್ತು ಪಾವತಿಸಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ, ಸದಸ್ಯರಾದ ಸವಿತಾ ಬಿ ಪಟ್ಟಣಶೆಟ್ಟೆ, ಬಿ.ಡಿ.ಯೋಗಾನಂದ ಭಾಂಡ್ಯ ಇವರ ಪೀಠವು ದಿ: 11-01-2024 ರಂದು ಆದೇಶಿಸಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...