Monday, December 15, 2025
Monday, December 15, 2025

Royal Diamond School ರಾಯಲ್ ಡೈಮಂಡ್ ಶಾಲೆಯಲ್ಲಿ ಸಂಭ್ರಮದ ಸಂಕ್ರಾಂತಿ

Date:

Royal Diamond School ಶಿವಮೊಗ್ಗದ ರಾಯಲ್ ಡೈಮಂಡ್ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ರೈತರು ವ್ಯವಸಾಯದಲ್ಲಿ ಬೆಳೆದ ಪೈರುಗಳನ್ನು ಒಕ್ಕಲು ಮಾಡಲು ಈ ಸಮಯವನ್ನು ಬಳಸಿಕೊಳ್ಳುತ್ತಾರೆ.ಆದ್ದರಿಂದ ಇಂತಹ ಸಮಯವನ್ನು ಸುಗ್ಗಿ ಹಬ್ಬವೆಂದು ಕರೆಯುವರು ಎಂದು ಡಾ. ನಾಗರಾಜ್ ಪರಿಸರ ವಿದ್ಯಾರ್ಥಿಗಳಿಗೆ ತಿಳಿಸಿದರು.

ಅವರು ರಾಯಲ್ ಡೈಮಂಡ್ ಶಾಲೆಯಲ್ಲಿ ಸಂಕ್ರಾಂತಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡುತ್ತಾ,ಈ ಅವಧಿಯಲ್ಲಿ ಸಿಹಿ ದವಸ ಧಾನ್ಯಗಳ ಸೇವನೆಯ ಸಂಕ್ರಾಂತಿ ಆಚರಣೆಯನ್ನು ಅತ್ಯಂತ ಸಡಗರ ಸಂಭ್ರಮಗಳಿಂದ ಆಚರಿಸುವ ಪದ್ಧತಿ ಅನಾದಿ ಕಾಲದಿಂದಲೂ ಆಚರಿಸುವ ವಾಡಿಕೆ ಇದೆ. ಇಂದಿನ ಪೀಳಿಗೆಯಾದ ಮಕ್ಕಳು ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಕಿ ಭಾಗ್ಯ ಅವರು ಮಾತನಾಡಿ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ, ಸಂಕ್ರಾಂತಿ ಎಂದರೆ ರೈತ ಪರಿವಾರದವರು ತಮ್ಮ ಬೆಳೆ, ಹೊಲ,ಎತ್ತು, ದನ ಕರುಗಳ ಜೊತೆ ಸಂಭ್ರಮಿಸುವ ಹಬ್ಬ. ಆದರೆ ಇಂದಿನ ದಿನ ಮಾನಗಳಲ್ಲಿ ಎತ್ತುಗಳು, ರೈತಾಪಿ ಕೃಷಿ ಪರಿಕರಗಳು ಮಾಯವಾಗಿ,ಯಂತ್ರಗಳು ಬಂದಿವೆ ಎಂದು ವಿಷಾದ ವ್ಯಕ್ತಪಡಿಸಿದರು.

Royal Diamond School ಇದೇ ಸಂದರ್ಭದಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಪಾಲಕರು ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಂಕ್ರಾಂತಿಯ ವಿಶೇಷ ಖಾದ್ಯ ಎಳ್ಳು ಬೆಲ್ಲವನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಕಾರ್ಯದರ್ಶಿಯಾದ ಪೂಜಾ ನಾಗರಾಜ್ ಪರಿಸರ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಖಜಾಂಚಿ ಸತೀಶ್, ನಿರ್ದೇಶಕಿಯಾದ ಶೈಲಜಾ ತಿಪ್ಪೇಸ್ವಾಮಿ, ಮುಖ್ಯ ಶಿಕ್ಷಕರು, ಶಿಕ್ಷಕರು,ವಿದ್ಯಾರ್ಥಿಗಳು ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...