Thursday, June 25, 2026
Thursday, June 25, 2026

Scheduled Caste Community ಪರಿಶಿಷ್ಟ ಸಮುದಾಯದವರಿಗೆ ನೀರಿನ ತೆರಿಗೆ ವಿಧಿಸದಿರಲು ಮನವಿ

Date:

Scheduled Caste Community ಪರಿಶಿಷ್ಟ ಜಾತಿ ಸಮುದಾಯದ ನಿವಾಸಿಗಳಿಗೆ ನೀರಿನ ತೆರಿಗೆ ಕಂದಾಯ ದಲ್ಲಿ ವಿಧಿಸಿರುವ ನೋಟೀಸ್ ಕೂಡಲೇ ರದ್ದುಪಡಿಸಬೇಕು ಎಂದು ಚಿಕ್ಕಮಗಳೂರು ನಗರಸಭಾ ಮಾಜಿ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಹಾಲಿ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಮಾಜಿ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್ ನೀರಿನ ತೆರಿಗೆ ಸಂಬಂಧ ಪರಿಶಿಷ್ಟ ಜಾತಿ ಜನಾಂಗಕ್ಕೆ 1993 ರ ನಡವಳಿಯಲ್ಲಿ ನೀರಿನ ಸಂಪರ್ಕವನ್ನು ಸಂಪೂರ್ಣ ಉಚಿತವಾಗಿ ಘೋಷಿಸಲಾಗಿತ್ತು.

ಇದೀಗ ನಗರಸಭೆ ಆಡಳಿತ ಮಂಡಳಿ ತೆರಿಗೆ ಕಟ್ಟಬೇಕು ಎಂದು ನೋಟೀಸ್ ನೀಡಿರುವುದು ಸರಿಯಲ್ಲ ಎಂದರು.
ಪ್ರಸ್ತುತ ದಂಟರಮಕ್ಕಿ, ಹಿರೇಮಗಳೂರು ಹಾಗೂ ತಮಿಳುಕಾಲೋನಿ ಬಡಾವಣೆಯಲ್ಲಿ ಅತಿಹೆಚ್ಚು ಸಂಖ್ಯೆ ಯಲ್ಲಿ ಪ.ಜಾತಿ, ಪ.ಪಂಗಡ ಸಮುದಾಯದ ಬಡ ಹಾಗೂ ಹಿಂದುಳಿದ ವರ್ಗಗಳೇ ವಾಸಿಸುತ್ತಿರುವ ಹಿನ್ನೆಲೆ ಯಲ್ಲಿ ನೀರಿನ ಸಂಪರ್ಕವನ್ನು ಉಚಿತವಾಗಿ ಒದಗಿಸಬೇಕೆಂದು ನಡವಳಿಯನ್ನು ಮಾಡಲಾಗಿತ್ತು ಎಂದರು.

Scheduled Caste Community ಒಂದು ವೇಳೆ ನೀರಿನ ತೆರಿಗೆ ಕಂದಾಯವನ್ನು ಪಾವತಿಸಲೇಬೇಕು ಎಂಬುದಾದರೆ ಪ.ಜಾತಿಗೆ ಮೀಸಲಿಟ್ಟಿದ್ದ ಶೇ.18 ಹಣವನ್ನು ಉಪಯೋಗಿಸಿಕೊಂಡು ನೀರಿನ ತೆರಿಗೆಯನ್ನು ರದ್ದುಪಡಿಸಿ ನಿವಾಸಿಗಳಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಅಕ್ಬರ್, ನಿವಾಸಿಗಳಾದ ಕೆಂಚಯ್ಯ, ಶಾರದಮ್ಮ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...