Sunday, August 2, 2026
Sunday, August 2, 2026

Lok Sabha Elections ಮತದಾರರ ಜಾಗೃತಿ ಬಗ್ಗೆ ವ್ಯಂಗ್ಯಚಿತ್ರ ಪ್ರದರ್ಶನ & ಕಾರ್ಯಾಗಾರ

Date:

Lok Sabha Elections ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

ಷರತ್ತು ಹಾಗು ನಿಬಂಧನೆಗಳು

  • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
  • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
  • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
  • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
  • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
  • ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ
  • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
  • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...