Tuesday, October 1, 2024
Tuesday, October 1, 2024

N.B.Shridar ಪಶುತಜ್ಞ & ಲೇಖಕ ಪ್ರಾಧ್ಯಾಪಕ ಡಾ.ಎನ್.ಬಿ.ಶ್ರೀಧರ್ ಅವರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

Date:

N.B.Shridar ಮಲೆನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದು ಇವರು ಉತ್ತಮ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಗಾಗಿ “ “ಶ್ರೇಷ್ಠ ಶಿಕ್ಷಕ” ಪ್ರಶಸ್ತಿ ನೀಡಿ ವಿಶ್ವವಿದ್ಯಾಲಯದ 19 ನೇ ಸಂಸ್ಥಾಪನೆಯ ದಿನದಂದು ಸನ್ಮಾನಿಸಿದೆ.

ಇವರು ಪಶುವೈದ್ಯಕೀಯ ರಂಗದಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ಔಷಧಶಾಸ್ತç ಮತ್ತು ವಿಷಶಾಸ್ತ್ರ ವಿಷಯವನ್ನು ಬೋಧನೆ ಮಾಡಿರುವುದನ್ನು, 200 ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವುದನ್ನು, ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ್ರವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ N.B.Shridar ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು ಮತ್ತು ರೈತರ ಮಾಹಿತಿಗಾಗಿ ಅನೇಕ ತಾಂತ್ರಿಕ ಮಾಹಿತಿಗಳನ್ನು ವಿವಿಧ ಮಾಧ್ಯಮಗಳ ಮೂಲಕ ನೀಡುತ್ತಿರುವುದನ್ನು, ಬಂಜೆತನದಿಂದ ಬಳಲುತ್ತಿರುವ ಎಷ್ಟೋ ರಾಸುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಉತ್ಪಾದಕವಾಗಿ ಮಾಡಿರುವುದನ್ನು ಹಾಗೂ ಇತ್ತೀಗಷ್ಟೆ ಇವರಿಗೆ ಭಾರತೀಯ ಪಶುವೈದ್ಯಕೀಯ ಔಷಧಶಾತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು ರಾಷ್ಟ್ರೀಯ ಫೆಲೋ ಪ್ರಶಸ್ತಿ ನೀಡಿರುವುದನ್ನು ಮತ್ತು ಕರ್ನಾಟಕ ಪಶುವೈದ್ಯ ಸಂಘವು ಜೀವ ಮಾನದ ಶ್ರೇಷ್ಟ ಪಶುವೈದ್ಯ ಪ್ರಶಸ್ತಿ ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...