Monday, February 2, 2026
Monday, February 2, 2026

Chikkamagaluru News ಪಂಚಾಯತ್ ಚುನಾವಣಾ ರಾಜಕೀಯಕ್ಕೆ ಅಡಿಕೆ ತೋಟ ನಾಶಪಡಿಸಿ ಕುಕೃತ್ಯ

Date:

Chikkamagaluru News ಚಿಕ್ಕಮಗಳೂರು, ತಾಲ್ಲೂಕಿನ ಆರದವಳ್ಳಿ ಗ್ರಾಮದಲ್ಲಿ ಸುಮಾರು ಎರಡು ವರ್ಷ ಪ್ರಾಯ ದ 120ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನು ಬೆಳಗಿನ ಜಾವದಲ್ಲಿ ಕಡಿದು ಬೀಸಾಡಲಾಗಿದೆ ಎಂದು ತೋಟದ ಮಾಲೀಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿದ ತೋಟದ ಮಾಲೀಕ ಎ.ಎಂ. ಶಿವಾನ0ದ್ ಆರದವಳ್ಳಿಯ ಸ.ನಂ.322ರ 0.26 ಗುಂಟೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಅಡಿಕೆ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿತ್ತು.

ಇದನ್ನು ಸಹಿಸದ ಗ್ರಾಮದ ಕೆಲವು ಮಂದಿ ಮುಂಜಾನೆ 5 ಗಂಟೆ ಸಮಯದಲ್ಲಿ ಏಕಾಏಕಿ ಅಡಿಕೆ ಸಸಿಗಳನ್ನು ಕಡಿದು ಬೀಸಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಸಿಗಳ ನಾಶದ ಸಂಬ0ಧ ತಮ್ಮ ಪತ್ನಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ದ್ವೇಷವನ್ನಿಟ್ಟುಕೊಂಡು ಗ್ರಾಮದ ಉಮೇಶ್, ಕೀರ್ತಿರಾಜ್, ಎ.ಎಸ್.ಮೋಹನ್‌ಕುಮಾರ್, ಎ.ಯು. ಪ್ರಕಾಶ್, ಸುಪ್ರೀತ್ ಹಾಗೂ ರಜನೀಕಾಂತ ಎಂಬುವವರು ಅಕ್ರಮವಾಗಿ ತೋಟಕ್ಕೆ ಪ್ರವೇಶಿಸಿ ಗಿಡಗಳನ್ನು ನಾಶ ಗೊಳಿಸ ಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Chikkamagaluru News ಅದಲ್ಲದೇ ಜಮೀನಿನಿಂದ ಮನೆಗೆ ತೆರಳುವ ಸಂದರ್ಭದಲ್ಲೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿ ಕೆಯನ್ನು ಹಾಕಲಾಗಿದ್ದು ಆ ನಿಟ್ಟಿನಲ್ಲಿ ಅಡಿಕೆ ಸಸಿ ನಾಶಗೊಳಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...