Thursday, June 18, 2026
Thursday, June 18, 2026

Sports News ಗುಂಡು ಎಸೆತ ಸ್ಪರ್ಧೆ ಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ವಿಶೇಷ ಚೇತನ ವಿದ್ಯಾರ್ಥಿ ಉದ್ನವ್ ಗೆ ಸಮನ್ವಯ ಕಾಶಿ ಅಭಿನಂದನೆ

Date:

Sports News ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಶಿವಮೊಗ್ಗದ ವಿದ್ಯಾರ್ಥಿ ಸುದ್ನವ್ ಅವರಿಗೆ ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಅಭಿನಂದಿಸಿ ಶುಭಹಾರೈಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾವಿಕೈಸರು ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿ ಸುದ್ನವ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪ್ರೌಢಶಾಲೆಯ ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾರೆ.

ದೈಹಿಕವಾಗಿ ಸವಾಲು ಹೊಂದಿರುವ ವಿಕಲಚೇತನ ವಿದ್ಯಾರ್ಥಿ ಸುದ್ನವ್ ಅತ್ಯಂತ ಬಡಕುಟುಂಬದ ಹಿನ್ನಲೆ ಹೊಂದಿದ್ದು, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದ್ದಾರೆ. ತಂದೆ ನಾಗೇಂದ್ರ ಸಣ್ಣ ರೈತರಾಗಿದ್ದಾರೆ.

Sports News ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಸುದ್ನವ್‌ಗೆ ಸಮನ್ವಯ ಟ್ರಸ್ಟ್‌ನ ಸಮನ್ವಯ ಕಾಶಿ, ಮುಖ್ಯಶಿಕ್ಷಕಿ ಸುಕೇತ, ದೈಹಿಕ ಶಿಕ್ಷಕ ದಿನೇಶ್ ಸೇರಿದಂತೆ ಶಿಕ್ಷಕ ವರ್ಗದವರು ಅಭಿನಂದಿಸಿ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...