Sunday, August 2, 2026
Sunday, August 2, 2026

Muzrai Temple ಕಣ್ಣನ್ ಕೇಸ್ ನೋಟೀಸ್ ಹಿಂಪಡೆಯಲು ತಹಶೀಲ್ದಾರ್ ಗೆ ಸಚಿವರ ಸೂಚನೆ

Date:

Muzrai Temple ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರಿನ ಕಲ್ಯಾಣ ಕೋದಂಡರಾಮ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಸರ್ಕಾರದಿಂದ ನೀಡಲಾಗುತ್ತಿದ್ದ ವೇತನವನ್ನು ಹಿಂದಿರುಗಿಸುವಂತೆ ಇತ್ತೀಚೆಗೆ ಅಲ್ಲಿನ ತಹಶೀಲ್ದಾರ್ ಸುಮಂತ್ ಅವರು ನೋಟಿಸ್ ಜಾರಿಗೊಳಿಸಿದ್ದರು. 10 ವರ್ಷಗಳ ವೇತನ ಹಿಂದಿರುಗಿಸುವಂತೆ ಸೂಚಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಕೂಡಲೇ ಎಚ್ಚೆತ್ತ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ನೋಟಿಸ್ ಹಿಂಪಡೆಯುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

2013-14 ನೇ ಸಾಲಿನಿಂದ 2016-17ನೇ ಸಾಲಿನ ತನಕ ತಿಂಗಳಿಗೆ 2000 ದಂತೆ ವರ್ಷಕ್ಕೆ 24,000 ಪಾವತಿಸಬೇಕಿತ್ತು. 2017-18 ನೇ ಸಾಲಿನಿಂದ 2021-22ನೇ ಸಾಲಿನ ತನಕ ತಿಂಗಳಿಗೆ 4, ವರ್ಷಕ್ಕೆ 48000 ಪಾವತಿಸಬೇಕಿತ್ತು. ಆದರೆ, ವರ್ಷಕ್ಕೆ 90 ವರ್ಷಗಳಿಗೆ ಒಟ್ಟು 8.10ರೂ. ಲಕ್ಷ ಪಾವತಿಸ ಲಾಗಿದೆ. ತಮ್ಮ ಖಾತೆಗೆ ಜಮೆ ಆಗಿರುವ 4.74 ಲಕ್ಷ ಹಿಂದಿರುಗಿಸಬೇಕು ಎಂದು ನೋಟಿಸ್ ನಲ್ಲಿ ತಹಶೀಲ್ದಾರರು ವಿವರಿಸಿದ್ದಾರೆ.
ಕೋದಂಡ ರಾಮಚಂದ್ರ ದೇಗುಲ ಸಿ ವರ್ಗಕ್ಕೆ ಸೇರಿದೆ. 9 ವರ್ಷಗಳ ಅವಧಿಯಲ್ಲಿ ಹುಂಡಿ ಹಣ 5.98 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಈ ಅವಧಿಯಲ್ಲಿ ವಿದ್ಯುತ್ ಶುಲ್ಕ, ರಥೋತ್ಸವ ಖರ್ಚು, ಅರ್ಚಕರ ವೇತನ ಸೇರಿ ಒಟ್ಟಾರೆ 12.96 ಅಕ್ಷ ರೂಪಾಯಿ ವೆಚ್ಚವಾಗಿದೆ ಎಂಬುದನ್ನ ನೋಟಿಸ್ ನಲ್ಲಿ ದಾಖಲಿಸಲಾಗಿದೆ.

Muzrai Temple ಈ ಕುರಿತು ಪ್ರತಿಕ್ರಿಯಿಸಿರುವ ಹಿರೇಮಗಳೂರು ಕಣ್ಣನ್ ಅವರು ದೇವಸ್ಥಾನದ ಆದಾಯ ಕಡಿಮೆ ಇದೆ ಎಂಬ ಕಾರಣಕ್ಕೆ ಈ ಹಿಂದೆ ಪಾವತಿ ಆಗಿರುವ ತಸ್ತಿಕ್ ಮೊತ್ತವನ್ನು ಹಿಂದಿರುಗಿಸುವಂತೆ ನೋಟಿಸ್ ನೀಡಿದ್ದಾರೆ. ಆದಾಯ ಕಡಿಮೆ ಇದ್ದ ಕಾರಣಕ್ಕೆ ಹಣ ವಾಪಸ್ ಕೇಳಿದರೆ ಅರ್ಚಕರ ಮನಸ್ಥಿತಿ ಏನಾಗಲಿದೆ ಎಂದು ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...