Thursday, June 18, 2026
Thursday, June 18, 2026

S. Rudregowda ರುದ್ರೇಗೌಡ ಅಭಿನಂದನಾ ಸಮಿತಿ ವತಿಯಿಂದ ಅಮೃತ ಮಹಿ ಸಮಾರೋಪ ಸಮಾರಂಭ

Date:

S. Rudregowda ಮಾನವೀಯ ಮೌಲ್ಯಗಳ ಸಕಾರಾಮೂರ್ತಿಗಳು, ಕಾಯಕ-ದಾಸೋಹದ ನಿಜ ಶರಣರು, ನಾಡು ಕಂಡ ಅಪರೂಪದ ವ್ಯಕ್ತಿತ್ವದ ಶ್ರೀ ಎಸ್. ರುದ್ರೇಗೌಡ ಅವರು ತಮ್ಮ 75ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಶುಭ ಸಂದರ್ಭದಲ್ಲಿ “ರುದ್ರೇಗೌಡ ಅಭಿನಂದನಾ ಸಮಿತಿ” ನಗರದ ಸರ್ಜಿ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ “ಅಮೃತ ಮಹಿ” ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಾಲ್ಗೊಂಡಿದ್ದರು.

ಈ ಅಭಿನಂದನ ಸಮಾರಂಭದಲ್ಲಿ ಶ್ರೀ ರುದ್ರೇಗೌಡ ಅವರ ಸಂಪೂರ್ಣ ಜೀವನ ಚರಿತ್ರೆ ಕುರಿತು “ರುದ್ರೇಗೌಡ- ದಿ ಐರನ್ ಮ್ಯಾನ್” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.

ಯುವಕರಿಗೆ ಈ ಒಂದು ಪುಸ್ತಕ ಉತ್ತಮ ಜೀವನ ಕಟ್ಟಿಕೊಳ್ಳುವಲ್ಲಿ ಮಾದರಿಯಾಗಲಿ ಎಂದು ಶುಭ ಹಾರೈಸಲಾಯಿತು.

S. Rudregowda ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ , ಸಂಸದರಾದ ಬಿ ವೈ ರಾಘವೇಂದ್ರ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಶಿವರಾಜ್ ಪಾಟೀಲ್ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ , ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಭಾನುಪ್ರಕಾಶ್, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಿ.ಎಲ್. ಶಂಕರ್ ಅವರು, ಹಿರಿಯ ಕೈಗಾರಿಕೋದ್ಯಮಿಗಳಾದ ಶ್ರೀ ನಂಜುಂಡಪ್ಪ ಶೆಟ್ಟರು ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...