Thursday, June 18, 2026
Thursday, June 18, 2026

S. Rudregowda ರುದ್ರೇಗೌಡ ಅಭಿನಂದನಾ ಸಮಿತಿ ವತಿಯಿಂದ ಅಮೃತ ಮಹಿ ಸಮಾರೋಪ ಸಮಾರಂಭ

Date:

S. Rudregowda ಮಾನವೀಯ ಮೌಲ್ಯಗಳ ಸಕಾರಾಮೂರ್ತಿಗಳು, ಕಾಯಕ-ದಾಸೋಹದ ನಿಜ ಶರಣರು, ನಾಡು ಕಂಡ ಅಪರೂಪದ ವ್ಯಕ್ತಿತ್ವದ ಶ್ರೀ ಎಸ್. ರುದ್ರೇಗೌಡ ಅವರು ತಮ್ಮ 75ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ಶುಭ ಸಂದರ್ಭದಲ್ಲಿ “ರುದ್ರೇಗೌಡ ಅಭಿನಂದನಾ ಸಮಿತಿ” ನಗರದ ಸರ್ಜಿ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ “ಅಮೃತ ಮಹಿ” ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪಾಲ್ಗೊಂಡಿದ್ದರು.

ಈ ಅಭಿನಂದನ ಸಮಾರಂಭದಲ್ಲಿ ಶ್ರೀ ರುದ್ರೇಗೌಡ ಅವರ ಸಂಪೂರ್ಣ ಜೀವನ ಚರಿತ್ರೆ ಕುರಿತು “ರುದ್ರೇಗೌಡ- ದಿ ಐರನ್ ಮ್ಯಾನ್” ಎಂಬ ಪುಸ್ತಕ ಬಿಡುಗಡೆ ಮಾಡಲಾಯಿತು.

ಯುವಕರಿಗೆ ಈ ಒಂದು ಪುಸ್ತಕ ಉತ್ತಮ ಜೀವನ ಕಟ್ಟಿಕೊಳ್ಳುವಲ್ಲಿ ಮಾದರಿಯಾಗಲಿ ಎಂದು ಶುಭ ಹಾರೈಸಲಾಯಿತು.

S. Rudregowda ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ , ಸಂಸದರಾದ ಬಿ ವೈ ರಾಘವೇಂದ್ರ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶ್ರೀ ಶಿವರಾಜ್ ಪಾಟೀಲ್ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ , ಮಾಜಿ ವಿಧಾನ ಪರಿಷತ್ ಶಾಸಕರಾದ ಶ್ರೀ ಭಾನುಪ್ರಕಾಶ್, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಿ.ಎಲ್. ಶಂಕರ್ ಅವರು, ಹಿರಿಯ ಕೈಗಾರಿಕೋದ್ಯಮಿಗಳಾದ ಶ್ರೀ ನಂಜುಂಡಪ್ಪ ಶೆಟ್ಟರು ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...