Monday, February 2, 2026
Monday, February 2, 2026

B. Y. Raghavendra ಕರಕುಶಲ ಸಂಸ್ಕ್ರತಿಗೆ ಕಿಶನ್ ಹ್ಯಾಂಡಿಕ್ರಾಫ್ಟ್ಸ್ ಕೊಡುಗೆ ಅಪಾರ – ಬಿ.ವೈ. ರಾಘವೇಂದ್ರ

Date:

B. Y. Raghavendra ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ಪ್ರಾರಂಭಗೊಂಡ ಕಿಶನ್ ಸಮೂಹ ಸಂಸ್ಥೆಗಳ ನೂತನ ಉದ್ಯಮ “ಕಿಶನ್ ವರ್ಲ್ಡ್ ಆಫ್ ಹ್ಯಾಂಡಿಕ್ರಾಫ್ಟ್ಸ್” ಉದ್ಘಾಟಿಸಿ ಮಾತನಾಡಿದ ಸಂಸದರು ಕಿಶನ್ ಹ್ಯಾಂಡಿಕ್ರಾಫ್ಟ್ಸ್ ಸಂಸ್ಥೆ ತನ್ನ ವಿನೂತನ ಮತ್ತು ವಿಶಿಷ್ಟ ಕರಕುಶಲ ಕಲಾಕೃತಿಗಳಿಗೆ ದೇಶ-ವಿದೇಶದಾದ್ಯಂತ ಖ್ಯಾತಿ ಗಳಿಸಿದೆ. ಈ ಸಂಸ್ಥೆಯ ಕಾರ್ಯವೈಖರಿ ಕಳೆದ 40 ವರ್ಷಗಳಿಂದ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಂಸ್ಥೆ ಇನ್ನೂ ಹೆಚ್ಚಿನ ಎತ್ತರಕ್ಕೆ ಬೆಳೆಯಲಿ ಎಂದು ಆಶಯ ವ್ಯಕ್ತಪಡಿಸಿದರು.

ದಿವ್ಯಸಾನಿಧ್ಯ ವಹಿಸಿದ್ದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮೀಜಿಯವರು ಮಾತನಾಡಿ ಕಲಾವಿದನ ತಾಳ್ಮೆ ಅಗಾಧವಾದದ್ದು. ಅತ್ಯಂತ ಪರಿಶ್ರಮದಿಂದ ತಯಾರಾಗುವ ಕಲಾಕೃತಿಗಳು ಕಲಾಭಿಮಾನಿ ಗ್ರಾಹಕರುಗಳಿಗೆ ಸೂಕ್ತ ಬೆಲೆಯೊಂದಿಗೆ ತಲುಪಿದಾಗ ಮಾತ್ರ ಕಲಾವಿದನ ಪರಿಶ್ರಮಕ್ಕೆ ಬೆಲೆ ಸಿಕ್ಕಂತೆ. ಅಂತಹ ಅಪರೂಪದ ಕಾರ್ಯವನ್ನು ಕಿಶನ್ ಹ್ಯಾಂಡಿಕ್ರಾಫ್ಟ್ಸ್ ಪಾಲಿಸಿಕೊಂಡು ಬಂದಿದೆ ಎಂದು ಆಶೀರ್ವಚನ ನೀಡಿದರು.

B. Y. Raghavendra ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ, ಮೇಲ್ಮನೆ ಶಾಸಕರಾದ ಶ್ರೀ ಡಿ. ಎಸ್. ಅರುಣ್, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಶ್ರೀ ಎನ್. ಗೋಪಿನಾಥ್, ನೆಹರೂ ರಸ್ತೆ ವರ್ತಕರ ಸಂಘದ ಅಧ್ಯಕ್ಷರಾದ ಶ್ರೀ ಬಿ.ಎ.ರಂಗನಾಥ್ ಮತ್ತು ಕಿಶನ್ ಸಮೂಹ ಸಂಸ್ಥೆಗಳ ಪಾಲುದಾರರಾದ ಶ್ರೀ ರವಿಕಿಶನ್, ಶ್ರೀ ಬಿ. ಆರ್. ಸುಭಾಷ್, ಶ್ರೀ ಬಿ. ಆರ್ ಸಂತೋಷ್ ಮತ್ತು ಕಿಶನ್ ಕುಟುಂಬವರ್ಗದವರು ಮತ್ತು ಕಿಶನ್ ಸಮೂಹದ ಸಿಬ್ಬಂದಿವರ್ಗ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...