Thursday, August 13, 2026
Thursday, August 13, 2026

Kannada and Culture Secretariat ಅಂಬೇಡ್ಕರ್ ಬಗ್ಗೆ ಎಲ್ಲರೂ ಓದಬೇಕು- ಡಾ. ನಾಗರಾಜ ಪರಿಸರ

Date:

Kannada and Culture Secretariat ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗ ಇವರ ಸಹಯೋಗದೊಂದಿಗೆ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ರಾಜೇಶ್ವರಿ ಎನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅಂಬೇಡ್ಕರ್ ಅವರ ಕನಸಿನಂತೆ ಎಲ್ಲರೂ ನಮ್ಮ ನಮ್ಮ ಕರ್ತವ್ಯಗಳನ್ನು ಬಹಳ ಶ್ರದ್ಧೆಯಿಂದ ಮಾಡುತ್ತಾ ಸಮಾಜದಲ್ಲಿ ಸಹಬಾಳ್ವೆಯೊಂದಿಗೆ ಗೌರವಯುತವಾಗಿ ಭಾರತೀಯರಾಗಿ ಬಾಳೋಣ ಎಂದು ತಿಳಿಸಿದರು.

ನಿಮ್ಮ ಭವಿಷ್ಯದ ಮೇಲೆ ನಂಬಿಕೆ ಇಡಬೇಡಿ ನಿಮ್ಮ ಶ್ರಮದ ಮೇಲೆ ನಂಬಿಕೆ ಇಡಿ ಎಂಬ ಅಂಬೇಡ್ಕರ್ ಅವರ ಮಾತನ್ನು ನೆನಪಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಡಾ. ನಾಗರಾಜ್ ಪರಿಸರ ಮುಖ್ಯಸ್ಥರು ಪರಿಸರ ವಿಜ್ಞಾನ ಹಾಗೂ ಭಾರತ ಸಂವಿಧಾನ ವಿಭಾಗ ಸಹ್ಯಾದ್ರಿ ವಿಜ್ಞಾನ ಕಾಲೇಜು ಇವರು ವಿದ್ಯಾವಂತರಾಗಿರಿ ಸಂಘಟಿತರಾಗಿರಿ ಮತ್ತು ಉತ್ತೇಜಿತರಾಗಿರಿ ಎಂಬ ಅಂಬೇಡ್ಕರ್ ಅವರ ಮಾತಿನಿಂದ ಆರಂಭಿಸಿ ಸಂಘಟಿತರಾಗುವ ಮೂಲಕ ಸಮಾಜದಲ್ಲಿ ಶೋಷಣೆಯನ್ನು ನಿಲ್ಲಿಸಬಹುದು. ವಿದ್ಯಾವಂತರಾದ ನಾವು ಮೂಢನಂಬಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.

ವಿದ್ಯಾವಂತರು ಪಡೆದ ಶಿಕ್ಷಣ ಬಡವರ ಕಣ್ಣೀರು ಒರೆಸುವುದಕ್ಕೆ ಸಹಾಯವಾಗಬೇಕೆ ಹೊರತು ಕಣ್ಣೀರು ಬರಿಸುವ ಕೆಲಸವಾಗಬಾರದು ಎಂದು ತಿಳಿಸಿದರು. ನುಡಿದಂತೆ ನಡೆಯುತ್ತ ಸತ್ಯ, ನ್ಯಾಯದ ಹಾದಿಯಲ್ಲಿ ಪ್ರಮಾಣಿಕವಾಗಿ ಎಲ್ಲರೊಡನೆ ಒಂದಾಗಿ ನಾವೆಲ್ಲ ಬಾಳೋಣ ಎಂದು ತಿಳಿಸಿದರು.

ಅಂಬೇಡ್ಕರ್ ಅವರ ಕನಸಿನಂತೆ ಬಡವರು ಬಡವರಾಗಿ ಉಳಿಯದೆ ಅವರನ್ನು ಮೇಲೆ ಎತ್ತುವ ಕೆಲಸ ಸಮಾಜದಲ್ಲಿ ಉಳ್ಳವರಿಂದ ಆಗಬೇಕಾಗಿದೆ, ಎಲ್ಲಾ ನನಗೆ ಬೇಕು ನಮ್ಮವರಿಗೆ ಬೇಕು ಎಂಬ ಭಾವನೆಯನ್ನು ಬಿಡಬೇಕಾಗಿದೆ ಎಂದು ತಿಳಿಸಿದರು.

Kannada and Culture Secretariat ಶ್ರೀ ಉಮೇಶ್. ಎಚ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ ಪ್ರಭಾಕರ್ ಬಿ. ಟಿ ಮುಖ್ಯಸ್ಥರು ಜೈವಿಕ ತಂತ್ರಜ್ಞಾನ ವಿಭಾಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...