Tuesday, October 1, 2024
Tuesday, October 1, 2024

B. Y. Raghavendra ಗೌ.ಅಡ್ವಾಣಿಯವರು ನಮ್ಮಂಥವರಿಗೆ ಸ್ಫೂರ್ತಿ ನೀಡಿದ ಹಿರಿಯ ನಾಯಕರು- ಸಂಸದ ರಾಘವೇಂದ್ರ

Date:

B. Y. Raghavendra ಮಾಜಿ ಉಪ ಪ್ರಧಾನಿಗಳಾದ ಸನ್ಮಾನ್ಯ ಶ್ರೀ ಲಾಲಕೃಷ್ಣ ಆಡ್ವಾಣಿಯವರಿಗೆ ದೇಶದ ಅತ್ಯುನ್ನತ ಗೌರವವಾದ ʻಭಾರತ ರತ್ನʼ ಘೋಷಣೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ದೇಶದ ಹಿತಕ್ಕಾಗಿ ಹಲವು ದಶಕಗಳ ಕಾಲ ಹಗಲಿರುಳು ಶ್ರಮಿಸಿ, ನಾನಾ ಸಂಕಷ್ಟಗಳನ್ನು ದಿಟ್ಟತನದಿಂದ ಎದುರಿಸಿ, ನನ್ನಂತಹ ಅನೇಕರಿಗೆ ಸ್ಫೂರ್ತಿ ಆಗಿರುವವರು ಶ್ರೀ ಲಾಲಕೃಷ್ಣ ಆಡ್ವಾಣಿಯವರು. ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟ, ಶ್ರೀರಾಮ ಜನ್ಮಭೂಮಿ ಹೋರಾಟ ಸೇರಿದಂತೆ ಇವರ ಅನೇಕ ಚಳುವಳಿಗಳು ಸಮಸ್ತ ದೇಶಭಕ್ತ ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದಿವೆ. ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಸರ್ಕಾರದ ವಿವಿಧ ಖಾತೆಗಳ ಸಚಿವರಾಗಿ ಹಾಗೂ ಹೆಮ್ಮೆಯ ಉಪ ಪ್ರಧಾನಿಯಾಗಿ ಇವರು ತೆಗೆದುಕೊಂಡ ನಿರ್ಧಾರಗಳು ದೇಶದ ಕೀರ್ತಿಯನ್ನು ಹೆಚ್ಚಿಸಿವೆ.
ಸನ್ಮಾನ್ಯರ ಶ್ರೇಷ್ಠ ಜೀವನವನ್ನು ಗೌರವಿಸಿ ಈ ಮಹತ್ವದ ನಿರ್ಧಾರ ತೆಗೆದುಕೊಂಡ ಪ್ರಧಾನಿ ಶ್ರೀ. ನರೇಂದ್ರ ಮೋದಿ
ಯವರಿಗೆ ಹೃತ್ಪೂರ್ವಕ ಪ್ರಶಂಸೆಗಳು ಎಂದು x ಖಾತೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...