Monday, February 2, 2026
Monday, February 2, 2026

Ayodhya Ram Mandir ಅಯೋಧ್ಯೆಯ ಹುಂಡಿಯಲ್ಲಿ ರಾಮಭಕ್ತರಿಂದ ಹರಕೆಹಣದ ಹೊಳೆ

Date:

Ayodhya Ram Mandir ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿದೆ.

ಬಾಲ ರಾಮನ ದರ್ಶನ ಪಡೆಯಲು ಸಹಸ್ರಾರು ಭಕ್ತ ಸಮೂಹ ಅಯೋಧ್ಯೆ ಗೆ ಪ್ರಯಾಣ ಮಾಡುತ್ತಿದ್ದಾರೆ. ರಾಮನ ಭಕ್ತರು ರಾಮನ ದರ್ಶನ ಪಡೆದು ಹರಕೆ ರೂಪದಲ್ಲಿ ದೇವಾಲಯದ ಹುಂಡಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ.

ಇದರಿಂದ ರಾಮಮಂದಿರದ ಕಾಣಿಕೆ ಡಬ್ಬಿಗಳು ತುಂಬುತ್ತಿವೆ. ಈಗಾಗಲೇ ದೇವಾಲಯದಲ್ಲಿ ಕಾಣಿಕೆ ಡಬ್ಬಿಗಳನ್ನು ಎಣಿಸಲು 11 ಮಂದಿ ಬ್ಯಾಂಕ್ ಸಿಬ್ಬಂದಿ ಹಾಗೂ 3 ಜನ ದೇವಾಲಯದ ನೌಕರರನ್ನು ನೇಮಿಸಲಾಗಿದೆ.

Ayodhya Ram Mandir ರಾಮ ಮಂದಿರ ಟ್ರಸ್ಟ್ ಪ್ರಕಾರ, ರಾಮಲಲ್ಲಾನ ಪ್ರತಿಷ್ಠಾಪನೆಯ ನಂತರ, 25 ಲಕ್ಷಕ್ಕೂ ಹೆಚ್ಚು ರಾಮ ಭಕ್ತರು ರಾಮಲಲ್ಲಾನನ್ನು ಭೇಟಿ ಮಾಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ಜನವರಿ 22 ರಿಂದ ಫೆಬ್ರವರಿ 1 ರವರೆಗೆ, ರಾಮಮಂದಿರದಲ್ಲಿರುವ ಕಾಣಿಕೆ ಪೆಟ್ಟಿಗೆಗಳಲ್ಲಿ ರಾಮ ಭಕ್ತರಿಂದ 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ಬಂದಿದೆ. ಆನ್‌ಲೈನ್‌ನಲ್ಲಿ ಸುಮಾರು 3.50 ಕೋಟಿ ರೂ. ಆಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...