Friday, March 20, 2026
Friday, March 20, 2026

Commission for Protection of Child Rights ಮಕ್ಕಳ ಹಕ್ಕು ಸಂರಕ್ಷಣೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕ್ರಮ-ಅಪರ್ಣಾ ಎ.ಕೊಳ್ಳ

Date:

Commission for Protection of Child Rights ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ದ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದ ಸದಸ್ಯರಾದ ಅಪರ್ಣಾ ಎಂ ಕೊಳ್ಳ ಎಚ್ಚರಿಕೆ ನೀಡಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿರ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಆಲ್ಕೊಳದ ಚೈತನ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳು-ಕಾಯ್ದೆಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Commission for Protection of Child Rights ದಿನೇ ದಿನೇ ಮಕ್ಕಳ ವಿರುದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ಜಿಲ್ಲೆಯಲ್ಲಿ 2023-24 ನೇ ಸಾಲಿನ ಏಪ್ರಿಲ್ ನಿಂದ ಡಿಸೆಂಬರ್‍ವರೆಗೆ ಒಡಗಡು 102 ಬಾಲ್ಯ ವಿವಾಹ ಪ್ರಕರಣಗಳು, 156 ಪೋಕ್ಸೋ ಪ್ರಕರಣಗಳು, 247 ಹದಿಹರೆಯದವರ ಗರ್ಭಧಾರಣೆ ಪ್ರಕರಣಗಳು ದಾಖಲಾಗಿವೆ.

ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಜೆಜೆ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ, ಆರ್‍ಟಿಇ ಕಾಯ್ದೆ, ಸೇರಿದಂತೆ ಹಲವಾರು ಕಾಯ್ದೆ ಕಾನೂನುಗಳಿದ್ದರೂ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಹಾಗಾದರೆ ಕಾಯ್ದೆ ಕಾನೂನು ಸಮರ್ಪಕವಾಗಿ ಅನುಷ್ಟಾನವಾಗುತ್ತಿಲ್ಲವಾ, ಪಾಲನೆಯಾಗುತ್ತಿಲ್ಲವಾ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ.

ಕೆಲವು ಜಿಲ್ಲೆಗಳಲ್ಲಿ ಮಕ್ಕಳ ಜೀವ ಮತ್ತು ಅವರ ಹಕ್ಕುಗಳಿಗೆ ಸಂಬಂಧಿಸಿದ ಕೆಲವು ಪ್ರಕರಣಗಳು ಘಟಿಸಿದ್ದು ನೇರವಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ವಿರುದ್ದ ಎಫ್‍ಐಆರ್ ದಾಖಲಿಸಲಾಗಿದೆ. ಆದ್ದರಿಂದ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅತಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಮಕ್ಕಳನ್ನು ಅವರ ಹಕ್ಕುಗಳನ್ನು ರಕ್ಷಿಸಬೇಕು. ಬಹಳ ಮುಖ್ಯವಾಗಿ ಅಧಿಕಾರಿ/ಸಿಬ್ಬಂದಿಗಳು ಕಾಯ್ದೆಗಳನ್ನು ತಿಳಿದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ತುಂಬಾ ಉಪಯುಕ್ತವಾಗಿದ್ದು ಇದರ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು.

12 ನೇ ಶತಮಾನದ ಶರಣೆ ಅಕ್ಕಮಹಾದೇವಿ ಜನಿಸಿದ ಈ ನೆಲದಲ್ಲಿ ಎಲ್ಲ ಅಧಿಕಾರಿಗಳು ನಾಳೆ ಮಾಡುವ ಕೆಲಸವನ್ನು ಇಂದೇ ಮಾಡು, ಇಂದು ಮಾಡುವ ಕೆಲಸವನ್ನು ಈಗಲೇ ಮಾಡು ಎನ್ನುವಂತೆ ಕಾರ್ಯ ಪ್ರವೃತ್ತರಾಗಬೇಕು. ತಾವು ಕಾಯ್ದೆಗಳ ಬಗ್ಗೆ ತಿಳಿದು ಮಕ್ಕಳಿಗೂ ತಿಳಿಸಬೇಕು. ಮಕ್ಕಳ ವಿರುದ್ದದ ಪ್ರಕರಣಗಳು ಕಡಿಮೆ ಆಗಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಮಾತನಾಡಿ, ಮಕ್ಕಳ ರಕ್ಷಣೆ ಕುರಿತಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಪ್ರತಿ ತಿಂಗಳು ಒಂದಿಲ್ಲೊಂದು ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ಎಷ್ಟೋ ಬಾರಿ ಮಕ್ಕಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ಸೋಲುವಂತಹ ಘಟನೆಗಳು ಘಟಿಸುತ್ತವೆ. ಆದ್ದರಿಂದ ಬಾಲ್ಯ ವಿವಾಹ, ಪೋಕ್ಸೋ ಇತರೆ ಮಕ್ಕಳ ವಿರುದ್ದ ದೌರ್ಜನ್ಯ ಕಂಡುಬಂದಲ್ಲಿ ಕೇವಲ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾತ್ರವಲ್ಲ ಎಲ್ಲ ಇಲಾಖೆಗಳು ಸೇರಿದಂತೆ ಸಾರ್ವಜನಿಕರು ಮಕ್ಕಳನ್ನು, ಅವರ ಹಕ್ಕು ರಕ್ಷಣೆಗೆ ಮುಂದಾಗಬೇಕು. ಹಾಗೂ ತಾಲ್ಲೂಕುಗಳ ಪ್ರದೇಶಗಳಲ್ಲಿ ಈ ರೀತಿ ಘಟನೆಗಳು ಸಂಭವಿಸಿದಾಗ ಜಿಲ್ಲೆಯಿಂದ ಅಧಿಕಾರಿಗಳು ಬರಲಿ ಎಂದು ಕಾಯುವ ಬದಲು ಸ್ಥಳೀಯವಾಗೆ ಮಕ್ಕಳನ್ನು ರಕ್ಷಿಸಿ ಕ್ರಮ ವಹಿಸಲು ಮುಂದಾದಾಗ ಅನೇಕ ಪ್ರಕರಣಗಳು ಕಡಿಮೆಯಾಗುತ್ತವೆ ಎಂದರು.

ಎಸ್ ಎಂ ಎಸ್ ಎಸ್ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಶನ್ ಪಿಂಟೊ ಮಾತನಾಡಿ,ಪ್ರಸ್ತುತ ಹೆಚ್ಚುತ್ತಿರುವ ಮಕ್ಕಳ ವಿರುದ್ದದ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರ ಇವರ ಕುರಿತು ರೂಪಿಸಿರುವ ಕಾಯ್ದೆ-ಕಾನೂನುಗಳಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು.

ಬೆಳೆಯುತ್ತಿರುವ ಆಧುನಿಕತೆಯಿಂದಾಗಿ ಸಾಕಷ್ಟು ಸಮಸ್ಯೆಗಳೂ ಹೆಚ್ಚುತ್ತಿವೆ. ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿದೆ. ಅದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ ಈ ಎಲ್ಲದರ ಬಗ್ಗೆ ಗಮನ ಹರಿಸಬೇಕು. ಹಾಗೂ ನಾವೆಲ್ಲರೂ ನನ್ನ ಸಮಸ್ಯೆಯಂತೆಯೇ ಬೇರೆಯವರ ಸಮಸ್ಯೆ ಕೂಡ ಎಂದು ಭಾವಿಸಿ ನಡೆದುಕೊಂಡಾಗ ಎಷ್ಟೋ ಸಮಸ್ಯೆಗಳು ಉದ್ಭವಿಸುವುದೇ ಇಲ್ಲವೆಂದರು.
ಕಾರ್ಯಾಗಾರದಲ್ಲಿ ಜೆಜೆ ಕಾಯ್ದೆ 2015, ಬಾಲವಿವಾಹ ನಿμÉೀಧ ಕಾಯ್ದೆ 2006, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡಡ ಕಾಯ್ದೆ 2012, ಆರ್ ಟಿಇ ಕಾಯ್ದೆ 2009, ಬಾಲಕಾರ್ಮಿಕತೆ, ಭಿಕ್ಷಾಟನೆ ನಿಷೇಧ, ಕೋರ್ಟ್ ವಿಚಾರಣೆ, ಸಾರ್ವಜನಿಕ ವಿಚಾರಣೆ ಕುರಿತು ಕಾರ್ಯಾಗಾರ ನಡೆಸಿ ಮಕ್ಕಳೊಂದಿಗೆ ಸಂವಾದ ನಡೆಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಅಧಿಕಾರಿಗಳು ಪರಿಹಾರ ಸೂಚಿಸಿದರು.

ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ತಾವು ದಿನ ನಿತ್ಯ ಎದುರಿಸುವ ಬಾಲ ಕಾರ್ಮಿಕತೆ, ಪ್ರೇಮ ಪ್ರಕರಣಗಳ ವಿಷಯ, ಕಳ್ಳತನ, ಮಾದಕ ವ್ಯಸನ, ಮಕ್ಕಳು ವಾಹನ ಚಲಾವಣೆ ಮಾಡುವುದು ಸೇರಿದಂತೆ ಅನೇಕ ವಿಷಯ ಕುರಿತಾಗಿ ನೇರವಾಗಿ ಆಯೋಗದ ಸದಸ್ಯರು ಹಾಗೂ ಅಧಿಕಾರಿಗಳನ್ನು ಪ್ರಶ್ನಿಸಿದರು.

ಆಯೋಗದ ಸದಸ್ಯರು ಹಾಗೂ ಡಿಡಿಪಿಐ, ಬಿಇಓ, ಪೊಲೀಸ್ ಅಧಿಕಾರಿಗಳು, ವೈದ್ಯರು, ಕಾರ್ಮಿಕ ಇಲಾಖೆ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸೇರಿದಂತೆ ಇತರೆ ಸಂಬಂಧಿಸಿದ ಅಧಿಕಾರಿಗಳು ಸ್ಥಳದಲ್ಲಿಯೇ ಉತ್ತರಿಸಿದರು.

ಕಾರ್ಯದಲ್ಲಿ ಡಿಡಿಪಿಐ ಪರಮೇಶ್ವರಪ್ಪ.ಸಿ.ಆರ್, ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಹಿರಿಯ ಮಕ್ಕಳ ವಿಶೇಷ ಪೊಲೀಸ್ ಅಧಿಕಾರಿ ಬಾಬು ಅಂಜನಪ್ಪ, ಸೋಮಶೇಖರಪ್ಪ ಜಿ.ಎಸ್, ಸಿಡಿಪಿಓ ಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...