Monday, December 15, 2025
Monday, December 15, 2025

Akashavani Bhadravati ಭದ್ರಾವತಿ ಆಕಾಶವಾಣಿಯ ವಜ್ರ ಮಹೋತ್ಸವ ವರ್ಷಾರಂಭ ಉದ್ಘಾಟನೆ

Date:

Akashavani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದ ವಜ್ರ ಮಹೋತ್ಸವ ವರ್ಷ ಆರಂಭದ ಹಿನ್ನೆಲೆಯಲ್ಲಿ ಕೇಂದ್ರದ ಆವರಣದಲ್ಲಿ ಕೇಳುಗರೊಂದಿಗೆ ಆಯೋಜಿಸಿದ್ದ ಸಂಭ್ರಮ ಆಚರಣೆ ಕಾರ್ಯಕ್ರಮದ ಮುನ್ನುಡಿ ಯಶಸ್ವಿಯಾಗಿ ಜರುಗಿತು.

ಭದ್ರಾವತಿ ಆಕಾಶವಾಣಿ ಕೇಂದ್ರವು 60ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಪತೊ ಪ್ರೊ. ಎಸ್.ವೆಂಕಟೇಶ್ ಅವರು ವಿಶ್ವಜ್ಞಾನಿ ಅಂಬೇಡ್ಕರ್ ಕುರಿತು ಪ್ರಸಾರವಾದ ಸರಣಿಯ ಪ್ರಶ್ನೆಗೆ ಸರಿ ಉತ್ತರ ನೀಡಿದ 45 ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಪ್ರೊ. ಎಸ್.ವೆಂಕಟೇಶ ಏಪ್ರಿಲ್ 14 ರಿಂದ ವರ್ಷಪೂರ್ತಿ ಅಂಬೇಡ್ಕರ್ ವಿಚಾರಧಾರೆಯನ್ನು ಆಕಾಶವಾಣಿ ಸಹಯೋಗದಲ್ಲಿ ಪ್ರಸಾರ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ವಜ್ರ ಮಹೋತ್ಸವದ ಪ್ರಯುಕ್ತ ಮಹಿಳೆಯರಿಗೆ ಅಡುಗೆ ಕಾರ್ಯಕ್ರಮ, ಮಕ್ಕಳಿಗೆ ಪಂಚತಂತ್ರ ಕಥೆ, ಶಿವಮೊಗ್ಗ ಪ್ರವಾಸಿತಾಣ ಪರಿಚಯ, ಸಿನಿಪ್ರಿಯರಿಗೆ ಚಿತ್ರಲಹರಿ, ಯುವಕರಿಗೆ ವೃತ್ತಿ ಮಾರ್ಗದರ್ಶನವನ್ನು ಒಳಗೊಂಡ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Akashavani Bhadravati ಕೇಳುಗರ ಪರವಾಗಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಉಮೇಶ್ ದಾವಣಗೆರೆ, ಅಥಣಿಯಿಂದ ಶ್ರೀಶೈಲ ತೇಲಿ, ಕಲ್ಬುರ್ಗಿ ಮಹೇಶ್ ಹಿಪ್ಪರಿಗಿ, ನ್ಯಾಮತಿ ಹಂಪಣ್ಣ. ಹಾಗೂ ಆಕಾಶವಾಣಿಯ ಎಲ್ಲಾ ಉದ್ಘೋಷಕರು, ಆಡಳಿತ ಅಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಜನ ಕೇಳುಗರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನಿಸಿಕೆ ಹಾಗೂ ಅಭಿಪ್ರಾಯವನ್ನು ನೇರ ಪ್ರಸಾರದಲ್ಲಿ ಹಂಚಿಕೊಂಡರು.

ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಸಿದ್ದೇಶ್, ತಾಂತ್ರಿಕ ವಿಭಾಗದ ಮುಖ್ಯಸ್ಥ ಪಿ.ಆರ್. ಶ್ರೀಪತಿ, ಕಾರ್ಯಕ್ರಮ ಅಧಿಕಾರಿ ಎಸ್.ಎಲ್.ರಮೇಶ್ ಪ್ರಸಾದ್, ಸಹಾಯಕ ಅಭಿಯಂತರ ನಟೇಶ್ ರಾಮನ್, ಬಸವರಾಜ ನೆಲ್ಲಿಸರ, ಬಸವರಾಜಪ್ಪ ಅಪರಂಜಿ ಶಿವರಾಜ್ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...