Saturday, September 28, 2024
Saturday, September 28, 2024

Department of Regional Transport ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ-ಶ್ರೀಮತಿ ರಮ್ಯ

Date:

Department of Regional Transport ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮುಖಾಂತರ ಸುರಕ್ಷಿತ ವಾಹನ ಸಂಚಾರಕ್ಕೆ ಮುಂದಾಗಬೇಕು ಎಂದು ಪ್ರಾದೇಶಿಕ ಸಾರಿಗೆ ಇಲಾಖೆ ಅಧೀಕ್ಷಕಿ ರಮ್ಯ ಹೇಳಿದರು.

ಚಿಕ್ಕಮಗಳೂರು ತಾಲೂಕಿನ ತೇಗೂರು ಸಮೀಪ ಲೈಫ್‌ಲೈನ್ಸ್ ಫೀಡ್ಸ್ನಲ್ಲಿ ವಾಹನ ಚಾಲಕರಿಗೆ ಏರ್ಪಡಿಸಿದ್ದ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ಮಂಗಳವಾರ ಪಾಲ್ಗೊಂಡು ಚಾಲಕರಿಗೆ ಮಾಹಿತಿ ನೀಡಿದರು.

ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಇದರಿಂದ ಅಮಾಯಕರು ಜೀವ ಕಳೆದುಕೊಂಡು ಕುಟುಂಬವನ್ನು ಬೀದಿಪಾಲಾಗುತ್ತಿದೆ. ಹೀಗಾಗಿ ಚಾಲಕರು ಅತ್ಯಂತ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು. ಪ್ರತಿಯೊಂದು ಜೀವ ಮುಖ್ಯ ಎಂಬುದನ್ನು ಅರ್ಥೈಸಿಕೊಳ್ಳಬೇಕು ಎಂದರು.

ರಸ್ತೆ ಸುರಕ್ಷತಾ ವಿಚಾರದಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಪ್ರತಿಯೊಬ್ಬರೂ ಆತ್ಮಶೋ ಧನೆ ಮಾಡಿಕೊಳ್ಳಬೇಕು. ಇನ್ನೊಬ್ಬರ ಜೀವಕ್ಕೂ ಬೆಲೆಯಿದೆ ಎನ್ನುವ ವಾಸ್ತವವನ್ನು ಅರಿತುಕೊಂಡು ವಾಹನ ಚಲಾವಣೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

Department of Regional Transport ರಸ್ತೆಗಳಲ್ಲಿ ಸಂಚರಿಸುವ ಮುನ್ನವೇ ದಾಖಲೆಗಳನ್ನು ಇರಿಸಬೇಕು. ದಾಖಲೆಗಳಿಲ್ಲದೇ ರಸ್ತೆಗೆ ಬರಕೂಡದು. ಚಾಲನಾ ಪರವಾನಗಿ, ವಾಹನದ ಆರ್‌ಸಿ, ವಿಮೆ ದಾಖಲೆ ಮತ್ತಿತರ ವಿವರಗಳನ್ನು ಹೊಂದಿರುವುದು ಕಡ್ಡಾಯ ವಾಗಿದ್ದು ಕಾನೂನಿಗಳಿಗೆ ಮಿಗಿಲಾದದ್ದು ಯಾವುದು ಇಲ್ಲ, ಹೀಗಾಗಿ ನಿಯಮಗಳನ್ನು ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನಿಂದ ನಡೆದುಕೊಳ್ಳಬೇಕು ಎಂದರು.

ಇದೇ ವೇಳೆ ರಸ್ತೆ ಸುರಕ್ಷತೆಯ ಮಾಹಿತಿಯುಳ್ಳ ಕೈಪಿಡಿಯನ್ನು ವಿತರಿಸಲಾಯಿತು. ಕಛೇರಿಯ ಪ್ರಥಮ ದರ್ಜೆ ಸಹಾಯಕ ರವಿಕಿರಣ್ ಅವರು ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳಾದ ಲೋಹಿತ್, ಹರೀಶ್, ಸಂತೋಷ್, ಲೈಫ್‌ಲೈನ್ ಫೀಡ್ಸ್ನ ಕಾಂತರಾಜು, ಸತೀಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...