Sunday, December 14, 2025
Sunday, December 14, 2025

Nayana Motamma ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿಗಳ ಬಗ್ಗೆ ಹಂತಹಂತವಾಗಿ ಪರಿಶೀಲನೆ- ಶಾಸಕಿ ನಯನ ಮೋಟಮ್ಮ

Date:

Nayana Motamma ಚಿಕ್ಕಮಗಳೂರು ಗ್ರಾಮೀಣ ಪ್ರದೇಶ ರಸ್ತೆಗಳ ಕಾಂಕ್ರೀಟೀಕರಣ ಅತ್ಯಂತ ಗುಣಮಟ್ಟತೆ ಯಿಂದ ಕೂಡಿರಬೇಕು. ಉತ್ತಮ ರಸ್ತೆ ನಿರ್ಮಿಸುವ ಮುಖಾಂತರ ಗ್ರಾಮಸ್ಥರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಸೂಚನೆ ನೀಡಿದರು.

ಚಿಕ್ಕಮಗಳೂರು ತಾಲ್ಲೂಕಿನ ವಸ್ತಾರೆ ಹೋಬಳಿಯ ಹೆಡದಾಳು ಗ್ರಾಮದ ಮಾವಿನಗುಣ ರಸ್ತೆಗೆ ಎಂ.ಡಿ.ಆರ್. ಯೋಜನೆಯ ಡಿ 1.50ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟೀಕರಣಕ್ಕೆ ಗುರುವಾರ ಗುದ್ದಲಿಪೂಜೆ ನೆರ ವೇರಿಸಿ ಅವರು ಮಾತನಾಡಿದರು.

ಕಳೆದ ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಸಮರ್ಪಕ ರಸ್ತೆ ನಿರ್ಮಿಸುವ ಸಂಬಂಧ ಗ್ರಾಮಸ್ಥರ ಬೇಡಿ ಕೆಯಿದ್ದ ಹಿನ್ನಲೆಯಲ್ಲಿ 1.6 ಕಿ.ಮೀ.ಗೆ ಕಾಂಕ್ರೀಟೀಕರಣಕ್ಕೆ ಅನುದಾನ ಬಿಡುಗಡೆ ಮಾಡಿ ಗುತ್ತಿಗೆದಾರರಿಗೆ ವಹಿಸಲಾ ಗಿದ್ದು ಗ್ರಾಮಸ್ಥರ ಪ್ರತಿಯೊಂದು ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದರು.

Nayana Motamma ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು ಹಲವಾರು ಜನಪರ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿಗಳು ಹೆಚ್ಚಾಗಿ ಗ್ರಾಮಾಂತರ ಪ್ರದೇಶದ ರೈತರಿಗೆ ಒತ್ತು ನೀಡುತ್ತಿರುವ ಜೊತೆಗೆ ಗ್ರಾಮಗಳ ಇತರೆ ಸವಲತ್ತುಗಳನ್ನು ಒದಗಿಸುವ ಮೂಲಕ ಪ್ರಾಮಾಣ ಕ ಕೆಲಸ ಮಾಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿ ಸಂಬಂಧ ಹಂತ ಹಂತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗು ವುದು ಎಂದ ಅವರು ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಬೇಕು. ಕಾಂಕ್ರೀಟೀಕರಣ ಪೂರ್ಣಗೊಳಿಸಲು ವೇಳೆಯಲ್ಲಿ ಗ್ರಾಮಸ್ಥರು ಆಗಾಗ ಕಾಮಗಾರಿಯನ್ನು ವೀಕ್ಷಿಸಬೇಕು ಎಂದು ಮನವಿ ಮಾಡಿದರು.

ಕೋಟೆಯೂರು ಗ್ರಾಮಸ್ಥ ಎಂ.ಎಸ್.ಸಚಿನ್ ಮಾತನಾಡಿ ಹಲವಾರು ಸಮಯದಿಂದ ಗ್ರಾಮಸ್ಥರು, ಶಾಲಾ ಮಕ್ಕಳು ಹಾಗೂ ವೃದ್ದರಿಗೆ ಈ ರಸ್ತೆಯಲ್ಲಿ ಸಂಚರಿಸಲು ಸಮಸ್ಯೆಯಾಗುತ್ತಿತ್ತು. ಇದೀಗ ಸರ್ಕಾರ ಗ್ರಾಮಸ್ಥರ ನೆರ ವಿಗೆ ಧಾವಿಸಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ ಎಂದರು.

ಈ ಸಂದರ್ಭದಲ್ಲಿ ಆಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್‌ಕುಮಾರ್, ಸದಸ್ಯರಾದ ಲೀಲಾವತಿ ಪುಟ್ಟರಾಜು, ಹೆಚ್.ಎನ್.ಲೋಕೇಶ್, ಗ್ರಾಮಸ್ಥರಾದ ಲೋಕೇಶ್, ಜಯರಾಮ್, ಎಂ.ಜೆ.ಸುರೇಶ್, ಸುಬ್ರಹ್ಮಣ್ಯ ಗೌಡ, ಶಂಕರ್, ಧರ್ಮೇಶ್, ಗುತ್ತಿಗೆದಾರ ವಿಶ್ವನಾಥ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...