Monday, December 15, 2025
Monday, December 15, 2025

Dalith Sangarsha Samiti ತರೀಕೆರೆ ತಹಶೀಲ್ದಾರ್ ಕಚೇರಿ ಎದುರು ದಸಂಸ ಪ್ರತಿಭಟನೆ

Date:

Dalith Sangarsha Samiti ಚಿಕ್ಕಮಗಳೂರಿನಲ್ಲಿ ನಿವೇಶನ ರಹಿತರ ಗುಡಿಸಲುಗಳನ್ನು ಏಕಾಏಕಿ ತೆರವುಗೊಳಿಸಿರುವ ಕ್ರಮವನ್ನು ವಿರೋಧಿಸಿ ತರೀಕೆರೆ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ದಸಂಸ ನೇತೃತ್ವದಲ್ಲಿ ನಿವೇಶನ ರಹಿತರ ಹೋರಾಟ ವೇದಿಕೆ ಮುಖಂಡರುಗಳು ಅಹೋರಾತ್ರಿ ಧರಣಿ ನಡೆಸಿ ಪ್ರತಿಭಟನೆಗೆ ಮುಂದಾದರು.

ಈ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ತರೀಕೆರೆ ತಾಲ್ಲೂಕು ಕಸಬಾ ಹೋಬಳಿ ಹೆಚ್.ರಂಗಾಪುರದ ಗ್ರಾಮದ ಸರ್ವೆ ನಂ.೧೪ ರಲ್ಲಿ ೫೭.೧೬ ಎಕರೆ ಸರ್ಕಾ ರಿ ಜಮೀನಿನಲ್ಲಿ ನಿವೇಶನ ರಹಿತರು ಗುಡಿಸಲು ನಿರ್ಮಿಸಿಕೊಂಡು ಜೈ ಭೀಮ್ ನಗರವೆಂದು ನಾಮಕರಣ ಮಾಡಿ ವಾಸಿಸುತ್ತಿದ್ದರು ಎಂದರು.

Dalith Sangarsha Samiti ಈ ಭಾಗದಲ್ಲಿ ಕೆಲವು ಭೂಗಳ್ಳರು ಭೂಮಿ ಹೊಡೆಯಲು ಸಂಚು ರೂಪಿಸುವ ಸಲುವಾಗಿ ವಾಸಿಸುತ್ತಿದ್ದ ನಿವೇಶನ ರಹಿತರ ಗುಡಿಸಲುಗಳನ್ನು ಕಿತ್ತು ಸುಟ್ಟು ಹಾಕುವ ಜೊತೆಗೆ ಬಡ ನಿವಾಸಿಗಳಿಗೆ ಜೀವಭಯ ಸೃಷ್ಟಿಸಿ ಅವರನ್ನು ಹೊಕ್ಕಲೆಬ್ಬಿಸುವ ಕುತಂತ್ರ ಕೈಹಾಕಲಾಗಿದೆ ಎಂದು ಆರೋಪಿಸಿದರು.

ಇಷ್ಟೆಲ್ಲಾ ಅನ್ಯಾಯ ನಡೆದಿದ್ದರೂ ಕೂಡಾ ತಹಶೀಲ್ದಾರರು ರಾಜಕೀಯ ಒತ್ತಡಕ್ಕೆ ಮಣ ದು ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಈ ಬಗ್ಗೆ ದಸಂಸ ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ದೋರಣೆ ಅನುಸರಿಸಲಾಗುತ್ತಿದೆ ಎಂದು ದೂರಿದರು.

ಹೀಗಾಗಿ ಬಡವರ ಗುಡಿಸಲನ್ನು ತೆರವುಗೊಳಿಸಲು ಮುಂದಾದವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ನಿವೇ ಶನ ರಹಿತರಿಗೆ ನ್ಯಾಯ ಒದಗಿಸುವವರೆಗೂ ಅಹೋರಾತ್ರಿ ಧರಣ ನಡೆಸಲು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡರುಗಳಾದ ಮಂಜುನಾಥ್ ನಂಬಿಯಾರ್, ಕುಮಾರ್, ತರೀಕೆರೆ ಅಹಿಂದಾ ಮುಖಂಡ ನರೇಂದ್ರ, ವೇದಿಕೆಯ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ಮಧುಕುಮಾರ್, ಖಜಾಂಚಿ ಪರಶುರಾಮ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...