Tuesday, February 3, 2026
Tuesday, February 3, 2026

Janaspandana Program ಜನಸ್ಪಂದನಕ್ಕೆ ಹೆಚ್ಚು ಸಂಖ್ಯೆ ಅರ್ಜಿಗಳು ,ರಾಜ್ಯದಲ್ಲಿ ಆಡಳಿತ ಕುಸಿದಿರುವುದರ ಸಂಕೇತ- ಎಸ್.ದತ್ತಾತ್ರಿ

Date:

Janaspandana Program ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ರಾಜ್ಯ ವ್ಯಾಪ್ತಿಯಿಂದ ಸುಮಾರು 20.000 ಜನಕ್ಕೂ ಹೆಚ್ಚು ಆಗಮಿಸಿ 12372 ಪರಿಹಾರಕ್ಕಾಗಿ ಅರ್ಜಿಗಳು ಬಂದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಪ್ರಕೋಷ್ಟಗಳ ರಾಜ್ಯ ಸಂಯೋಜಕರಾದ ಎಸ್ ದತ್ತಾತ್ರೇಯವರು ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯಿತಿಯಲ್ಲೂ ಕೂಡ ಪರಿಹಾರ ಸ್ಥಾನದ ಬೆಂಗಳೂರಿನಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದು ಅರ್ಜಿ ನೀಡಿರುವುದು ನಿಜಕ್ಕೂ ಅತ್ಯಂತ ಬೇಸರದ ಸಂಗತಿ ಎಂದಿದ್ದಾರೆ.

Janaspandana Program ಉಸ್ತುವಾರಿ ಸಚಿವರುಗಳು ಜಿಲ್ಲಾಡಳಿತವನ್ನು ನಿಯಂತ್ರಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿರುವುದು ಎದ್ದು ಕಾಣುತ್ತಿದೆ. ಈ ಕಾರಣಕ್ಕಾಗಿ ಜನರು ಬೇಸತ್ತು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ದೌಡಾಯಿಸುವ ಪರಿಸ್ಥಿತಿ ಬಂದಿರೋದು ನಿಜಕ್ಕೂ ಖೇದಕರ. ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಅರ್ಜಿಗಳು ಇನ್ನೂ ಕೂಡ ವಿಲೆವಾರಿಯಾಗದೆ ಪರಿಹಾರ ಸಿಗದಿರುವುದು ಖಂಡನೀಯ ಎಂದಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಜವಾಬ್ದಾರಿ ಆಡಳಿತ ನೀತಿಯಿಂದಾಗಿ ರಾಜ್ಯದ ಜನರು ಅನಾಥರಾಗಿದ್ದಾರೆ. “ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಈ ತಕ್ಷಣವೇ ಮಾನ್ಯ ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿ ಆಡಳಿತ ಯಂತ್ರ ಚುರುಕುಗೊಳಿಸಲು ನಿರ್ದೇಶನ ನೀಡಬೇಕಾಗಿ ಮಾನ್ಯ ರಾಜ್ಯಪಾಲರಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...