Thursday, March 19, 2026
Thursday, March 19, 2026

R. Ashoka ಗುತ್ತಿಗೆದಾರರಿಗೆ ಹಣ ಪಾವತಿ ಪ್ರಕರಣ ವಿಚಾರಣಾ ಆಯೋಗ ರಚನೆ ಹಿನ್ನೆಲೆ, ಆಪಾದನೆಗಳು ಸರಿ ಇದ್ದಂತಿದೆ- ಆರ್.ಅಶೋಕ್

Date:

R. Ashoka ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ” ಎಂದು ಮಾನ್ಯ ಹೈಕೋರ್ಟ್ ಕಾಂಗ್ರೆಸ್
ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿ.ಎಂ. ಸಿದ್ದರಾಮಯ್ಯ
R. Ashoka ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ.ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ
ಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಸಿದ್ದರಾಮಯ್ಯನವರೇ, ತಮಗೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...