Friday, April 18, 2025
Friday, April 18, 2025

Shivamogga City Corporation ಫೆ.20 ರಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತದಿಂದಶ್ರೀ ಸರ್ವಜ್ಞ ಜಯಂತಿ ಆಚರಣೆಗೆ ಸಿದ್ಧತೆ

Date:

Shivamogga City Corporation ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಿವಮೊಗ್ಗ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಜಿಲ್ಲಾ ಕುಂಬಾರರ ಸಂಘ, ಶಿವಮೊಗ್ಗ ಇವರುಗಳ ಸಂಯಕ್ತಾಶ್ರಯದಲ್ಲಿ ಫೆ.20 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಸರ್ವಜ್ಞ ಜಯಂತಿಯನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

Shivamogga City Corporation ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಕುಂಬಾರ ಸಂಘಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಾನಪದ ಗಾಯಕರು ಮತ್ತು ನಿವೃತ್ತ ಪ್ರಾಂಶುಪಾಲ ಕೆ. ಯುವರಾಜ್‍ರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...