Wednesday, October 2, 2024
Wednesday, October 2, 2024

Shivamogga Dc ಕಚೇರಿಗೆ ಜನಸಾಮಾನ್ಯರನ್ನುಅನಾವಶ್ಯಕ ಅಲೆದಾಡಿಸಬೇಡಿ- ಗುರುದತ್ತ ಹೆಗಡೆ

Date:

Shivamogga Dc ತಮ್ಮ ಅಗತ್ಯ ಕೆಲಸ-ಕಾರ್ಯಗಳ ನಿಮಿತ್ತ ಹಾಗೂ ಸೌಲಭ್ಯವನ್ನು ನಿರೀಕ್ಷಿಸಿ ಕಚೇರಿಗೆ ಬರುವ ಗ್ರಾಮೀಣರಿಗೆ, ಜನಸಾಮಾನ್ಯರಿಗೆ, ಅದರಲ್ಲೂ ವಿಶೇಷವಾಗಿ ಜನಸಾಮಾನ್ಯರಿಗೆ ವಿಳಂಬಕ್ಕೆ ಅವಕಾಶವಿಲ್ಲದಂತೆ ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಕೆಲಸಗಳನ್ನು ತುರ್ತಾಗಿ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಭದ್ರಾವತಿ ತಾಲೂಕು ಕಚೇರಿಗೆ ಭೇಟಿ ಮಾಡಿ, ಕಚೇರಿಗೆ ಬಂದಿದ್ದ ಜನಸಾಮಾನ್ಯರೊಂದಿಗೆ ಇಲಾಖಾ ಸೇವೆಗಳ ಬಗ್ಗೆ ಮಾಹಿತಿ ಪಡೆದು, ನಂತರ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳನ್ನು ಪ್ರಾಮಾಣಿಕವಾಗಿ ಅರ್ಹರನ್ನು ಗುರುತಿಸಿ ತಲುಪಿಸಬೇಕು. ಕಚೇರಿಗೆ ಬರುವ ಜನಸಾಮಾನ್ಯರಿಗೆ ಅನವಶ್ಯಕವಾಗಿ ಕಚೇರಿಗೆ ಅಲೆದಾಡದಂತೆ ಸರಿಯಾದ ಮಾರ್ಗದರ್ಶನ ನೀಡಿ, ಅವರು ನೀಡುವ ಅರ್ಜಿಗಳನ್ನು ಸಣ್ಣ ಕಾರಣಗಳಿಗಾಗಿ ಹಿಂದಕ್ಕೆ ಕಳುಹಿಸದೇ ಸಹಕರಿಸುವಂತೆ ಹಾಗೂ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ಜನಸಾಮಾನ್ಯರೊಂದಿಗೆ ಸೌಜನ್ಯುಯುತವಾಗಿ ವರ್ತಿಸುವಂತೆ ಹಾಗೂ ಜನಸ್ನೇಹಿ ಆಡಳಿತ ನೀಡುವಂತೆ ಸೂಚಿಸಿದ ಅವರು, ಸರ್ಕಾರದ ಸೌಲತ್ತುಗಳನ್ನು ಅರ್ಹರಿಗೆ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ತಲುಪಿಸುವಂತೆ ಅವರು ಸಲಹೆ ನೀಡಿದರು.

Shivamogga Dc ಈ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...