Monday, February 2, 2026
Monday, February 2, 2026

Basavanna ಅನುಭವ ಮಂಟಪ ಮೂಲಕ ಸಂಸತ್ತಿನ ಕಲ್ಪನೆ ಕೊಟ್ಟ ಬಸವಣ್ಣ ಮಹಾನ್ ಚಿಂತಕರು-ಎನ್.ಎನ್.ಕಬ್ಬೂರ್

Date:

Basavanna ವಿಶ್ವ ಗುರು, ಜಗಜ್ಯೋತಿ ಬಸವಣ್ಣನವರು ಇಂದು ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿ ವಿಶ್ವದ ಮಾನ್ಯತೆಯನ್ನು ಪಡೆದಿದ್ದಾರೆ, ಅಂತರಂಗ ಮತ್ತು ಬಹಿರಂಗ ಶುದ್ಧಿಯ ಬಗ್ಗೆ ತಮ್ಮ ವಚನಗಳ ಮೂಲಕ ತಿಳಿಸಿ, ಅನುಭವ ಮಂಟಪದ ಮೂಲಕ ವಿಶ್ವದಲ್ಲೇ ಸಂಸತ್ತಿನ ಕಲ್ಪನೆ ಮೂಡಿಸಿದ ಮಹಾನ್ ಚಿಂತಕರಾಗಿ ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವಣ್ಣನವರ ಫೋಟೋ ಅನಾವರಣ ಮತ್ತು ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾತಿ-ಧರ್ಮ ಮೇಲು-ಕೀಳು ಎಲ್ಲವನ್ನು ಮೀರಿ, ಮಾನವ ಕುಲ ಒಂದೇ ಎಂಬ ಸಂದೇಶ ಇಡೀ ವಿಶ್ವಕ್ಕೆ ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ ಎಂದರು.

Basavanna ನಂತರ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು, ಮಕ್ಕಳು ಬಸವಣ್ಣನವರ ವಚನಗಳನ್ನು ಹೇಳಿದರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...