Tuesday, December 16, 2025
Tuesday, December 16, 2025

Shobha Karandlaje ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮತದಾರರಿಂದ ಸಭೆಯಲ್ಲಿ ನೇರ ವಾಗ್ದಾಳಿ

Date:

Shobha Karandlaje ಮಲ್ಪೆಯಿಂದ ಉಡುಪಿವರೆಗಿನ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಉಡುಪಿಯಲ್ಲಿ ನಡೆದ ಸಭೆಯಲ್ಲಿ ಮೀನುಗಾರರ ಒಕ್ಕೂಟದ ಮುಖಂಡರು ವಾಗ್ದಾಳಿ ನಡೆಸಿದರು. ‘ನಮಗಾಗಿ ನೀವು ಏನು ಮಾಡಿದ್ದೀರಿ?’ ಎಂದು ಪ್ರಶ್ನಿಸಿದ ಸ್ಥಳೀಯರ ಮುಖಂಡರು ಮತ್ತು ಸಚಿವರ ನಡುವೆ ಮಾತಿನ ಚಕಮಕಿ ನಡೆಯಿತು.

ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮೀನುಗಾರರ ಸಂಘದ ಮುಖಂಡ ಕಿಶೋರ್ ಸುವರ್ಣ ಬಿಜೆಪಿ ಸಂಸದರ ಮುಂದೆ ವಿಷಯ ಪ್ರಸ್ತಾಪಿಸಿದರು.

ಮೂನುಗಾರ ಸಂಘಟನೆಗಳ ಮುಖಂಡರು ಪ್ರಶ್ನಿಸಿರುವ ಸಭೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೂರೂವರೆ ಕಿಲೋಮೀಟರ್ ಉದ್ದದ ಹೆದ್ದಾರಿ ನಿರ್ಮಾಣ ವಿಳಂಬದ ಬಗ್ಗೆ ಸಂಘದ ಸದಸ್ಯರು ಸಚಿವರನ್ನು ಪ್ರಶ್ನಿಸುತ್ತಿರುವುದನ್ನು ಕಾಣಬಹುದು.

10 ವರ್ಷಗಳಿಂದ ನಾವು ನಿಮಗೆ ಮತ ಹಾಕಿದ್ದೇವೆ, ನೀವು ನಮಗಾಗಿ ಏನು ಮಾಡಿದ್ದೀರಿ? ನೀವು ಈ ಭಾಗದ ಜನರನ್ನು ಕರೆದು ಸಭೆ ನಡೆಸಿದ್ದೀರಾ? ನೀವು ಮಾಡಿಲ್ಲ, ಯಾಕೆ ಮಾಡಲಿಲ್ಲ? ನೀವು ನಮ್ಮ ಪ್ರತಿನಿಧಿಯಲ್ಲವೇ? ನಿಮಗೆ ಜವಾಬ್ದಾರಿಗಳಿಲ್ಲವೇ? ಆ ರಸ್ತೆಯ ಬಗ್ಗೆ ನೀವು ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಭೆಯಲ್ಲಿ ಭಾಗವಹಿಸಿದ್ದವರು ಕರಂದ್ಲಾಜೆ ಅವರ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟರು.

Shobha Karandlaje ‘ಸಚಿವ ನಿತಿನ್ ಗಡ್ಕರಿ ಅವರು ನಿಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ನೀವು ಹೇಳುತ್ತೀರಿ. ನೀವು ಅವರ ಮಾತನ್ನು ಕೇಳಿದ್ದೀರಿ. ಸಚಿವರು ಸುಳ್ಳು ಹೇಳುತ್ತಿದ್ದಾರೆ ಎಂದು ಲಿಖಿತವಾಗಿ ಬರೆದುಕೊಡಿ; ನಾವು ನಿಮ್ಮನ್ನು ಮತ್ತೆ ಕೇಳುವುದಿಲ್ಲ. ನಮ್ಮೊಂದಿಗೆ ಒಂದೇ ಒಂದು ಮಾಹಿತಿಯನ್ನು ಹಂಚಿಕೊಂಡಿಲ್ಲ, ನೋಟಿಫಿಕೇಶನ್ ಕೂಡ ಆಗಿಲ್ಲ ಎಂದು ಬರವಣಿಗೆಯಲ್ಲಿ ಕೊಡಿ’ ಎಂದು ಮತ್ತೊಬ್ಬರು ಜೋರು ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...