Monday, February 2, 2026
Monday, February 2, 2026

Chhatrapati Shivaji Maharaj  ಹಿರಿಯರಿಗೆ ಗೌರವ,ಸಂಸ್ಕೃತಿ ಪಾಲನೆ ಮಾಡಿದರೆ ಶಿವಾಜಿಗೆ ನೀಡುವ ದೊಡ್ಡ ಗೌರವ

Date:

Chhatrapati Shivaji Maharaj  ಶಿವಾಜಿ ಮಹಾರಾಜರ ಜೀವನ ಚರಿತ್ರೆಯನ್ನು ಮಕ್ಕಳಿಗೆ ಬಾಲ್ಯದಿಂದಲೇ ತಿಳಿಸುವ ಮುಖಾಂತರ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಪಾಲಕರು ಪ್ರೇರೇಪಿಸಬೇಕು ಎಂದು ವಂದೇ ಮಾ ತರಂ ಟ್ರಸ್ಟ್ ಅಧ್ಯಕ್ಷ ಪ್ರೀತೇಶ್ ಹೇಳಿದರು.

ಚಿಕ್ಕಮಗಳೂರುನಗರದ ಬಸವನಹಳ್ಳಿ ಸಮೀಪ ಶಂಕರಮಠದಲ್ಲಿ ಹಿಂದೂ ಹೃದಯ ಸಾಮ್ರಾಟ್ ಶಿವಾಜಿ ಮಹಾರಾಜರ 394ನೇ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಸಂಜೆ ಪುಟಾಣಿ ಮಕ್ಕಳಿಗೆ ಹಿಂದುತ್ವ ಎಂಬ ಆಟಿಕೆಯ ಕಾರ್ಯಕ್ರಮ ಆಯೋಜಿಸಿ ಮಾತನಾಡಿದ ಅವರು ಭಾರತೀಯ ಸಂಸ್ಕೃತಿಗಾಗಿ ಹೋರಾಡಿದವರನ್ನು ಇಂದಿನ ಯುವಪೀಳಿಗೆ ಸ್ಮರಿಸಬೇಕು ಎಂದು ತಿಳಿಸಿದರು.

ಶಿವಾಜಿ ಬದುಕಿನ ಚರಿತ್ರೆಯ ಹಾಗೂ ಆದರ್ಶಗಳನ್ನು ಅನುಸರಿಸುವ ಮಕ್ಕಳು ಮಾತೃ ಭೂಮಿ ಭಕ್ತರಾಗುತ್ತಾರೆ. ಶಿವಾಜಿಯಂತೆ ಧರ್ಮ ರಕ್ಷಣೆ ಮಾಡುವ ಗುಣವನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸಿಕೊಳ್ಳಬೇಕು, ಹಿರಿಯರಿಗೆ ಗೌರವ ಕೊಡುವುದು,ಮ ಸಂಸ್ಕೃತಿ ಪಾಲಿಸುವುದು ಮಾಡಿದರೆ ಮಾತ್ರ ಶಿವಾಜಿ ಮಹಾರಾಜರಿಗೆ ನೀಡುವ ದೊಡ್ಡ ಗೌರವ ಎಂದರು.

ಶಿವಾಜಿ ಭಾರತ ಚರಿತ್ರೆಯನ್ನು ಬದಲಾಯಿಸಿದ ಯುಗ ಪುರುಷ ಹಾಗೂ ಪ್ರೇರಣಾ ಶಕ್ತಿ. ದೇಶವನ್ನು ಗುಲಾಮಗಿರಿಗೆ ಒಡ್ಡುವ ಸಂದರ್ಭದಲ್ಲಿ ಪ್ರಬಲ ತಡೆ ಒಡ್ಡಿ ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸಿ, ಮರುಸ್ಥಾಪಿಸಿದವರು.

ಎಲ್ಲಾ ಭಾಷಿಕರು ಹಾಗೂ ಸಮುದಾಯಗಳನ್ನು ಸಮನಾಗಿ ನೋಡುವ ಪರಂಪರೆ ಮೊದಲಿನಿಂದಲೂ ರೂಢಿಸಿಕೊಂಡಿದ್ದರು ಎಂದರು.

ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಪುಟಾಣಿ ಮಕ್ಕಳಿಗೆ ಹಿಂದುತ್ವ ಎಂಬ ಆಟಿಕೆಯ ಆಟವನ್ನು ಆಡಿಸಲಾಯಿತು. ಕು. ಶ್ರೇಯಾ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಕುರಿತು ವಿವರಿಸಿದರು.
ಇದೇ ವೇಳೆ ಹಿಂದುತ್ವಕ್ಕಾಗಿ ಜಿಲ್ಲೆಯಲ್ಲಿ ಹೋರಾಡುತ್ತಿರುವ ಕಾಮಧೇನು ಗೋ ಶಾಲೆಯ ಲಕ್ಷ್ಮಣ್, ಕೀವ್ ರಾಮ್, ಸಂತೋಷ್ ಕೋಟ್ಯಾನ್, ತುಡುಕೂರು ಮಂಜು, ರಾಜು ಕಲ್ಲುದೊಡ್ಡಿ ಅವರಿಗೆ ಧರ್ಮ ಕಾರ್ಯ ಗುರುತಿಸಿ ಸನ್ಮಾನ ಮಾಡಲಾಯಿತು.

Chhatrapati Shivaji Maharaj  ಈ ಸಂದರ್ಭದಲ್ಲಿ ಟ್ರಸ್ಟ್ನ ಮುಖಂಡರುಗಳಾದ ಸಂಜಿತ ಸುವರ್ಣ, ಇಂ ದಿರಾ, ಶಾರದಾ, ಚಂದ್ರಕಲಾ, ಮಹೇಶ್ ಮೇದಾರ್, ನೀತೇಶ್, ನವೀನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...