Friday, March 20, 2026
Friday, March 20, 2026

Astronomy ಗ್ರಹಗಳು,ಭೂಮಿ,ಸೂರ್ಯಚಂದ್ರರ ಬಗ್ಗೆ ವಾಸ್ತವ& ವೈಜ್ಞಾನಿಕ ಮಾಹಿತಿ ತಿಳುವಳಿಕೆ ಅಗತ್ಯ- ಹರೋನಹಳ್ಳಿ ಸ್ವಾಮಿ

Date:

Astronomy ಪ್ರಾಚೀನ ಭಾರತದಲ್ಲಿ ಖಗೋಳಶಾಸ್ತ್ರವು ಆರ್ಯಭಟ, ಬ್ರಹ್ಮಗುಪ್ತ, ಭಾಸ್ಕರಚಾರ್ಯರಂತಹ ಶ್ರೇಷ್ಠ ಜ್ಞಾನಿಗಳ ಕೊಡುಗೆಯಿಂದ ಅಗ್ರಮಾನ್ಯತೆ ಪಡೆದಿತ್ತು ಎಂದು ಖಗೋಳ ವೀಕ್ಷಕ ಹರೋನಹಳ್ಳಿ ಸ್ವಾಮಿ ಅಭಿಪ್ರಾಯಪಟ್ಟರು.

ಸ್ವಾಮಿ ವಿವೇಕನಾಂದ ಬಡಾವಣೆಯ ಶ್ರೀನಾಗಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಟೆಲಿಸ್ಕೋಪ್ ಮೂಲಕ ಚಂದ್ರ, ನಕ್ಷತ ಪುಂಜಗಳ ಆಕಾಶ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ದೇಶದ ಹೆಮ್ಮಯ ಜ್ಞಾನವನ್ನು ಆಕಾಶ ವೀಕ್ಷಣೆ ಮೂಲಕ, ವಿಶ್ವದ ಜ್ಞಾನ ತಿಳಿಯುವ ಮೂಲಕ ಅರಿತು ನಮ್ಮ ಚಿಂತನೆಗಳನ್ನು ವೃದ್ಧಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಗ್ರಹಗಳು, ಭೂಮಿ, ಸೂರ್ಯ, ಚಂದ್ರರ ಕುರಿತು ವಾಸ್ತವ ಮತ್ತು ವೈಜ್ಞಾನಿಕ ಮಾಹಿತಿಗಳನ್ನು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ. ಮೂಡನಂಬಿಕೆಗಳಿಂದ ಹೊರಬರಬೇಕು ಎಂದು ಸಲಹೆ ನೀಡಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ವಿಜ್ಞಾನದ ಕಾರ್ಯಕ್ರಮ ಜತೆಯಾಗಿಸಿರುವುದು ಉತ್ತಮ ಸಂಗತಿ ಆಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಕಾಶ ವೀಕ್ಷಣೆ ಕಾರ್ಯಕ್ರಮಕ್ಕೆ ಆಗಮಿಸಿರುವುದು ಸಂತಸದ ಸಂಗತಿ. ಧರ್ಮ ಮತ್ತು ವಿಜ್ಞಾನ ಜತೆಗೂಡಿ ವೈಜ್ಞಾನಿಕ ಚಿಂತನೆಯೊಂದಿಗೆ ಜನರು ಜೀವನ ನಡೆಸಿದರೆ ಅನೇಕ ಸಮಸ್ಯೆಗಳಿಂದ ಹೊರಬರಬಹುದು ಎಂದರು.

Astronomy ಆಕಾಶ ವೀಕ್ಷಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ಗೌರವಾಧ್ಯಕ್ಷ ಎಸ್.ಜ್ಞಾನೇಶ್ವರ್, ಅಧ್ಯಕ್ಷ ನಾಗರಾಜ್, ಶಾಂತಾ ಶೆಟ್ಟಿ, ಶಶಿಧರ್ ಮತ್ತಿತರರು ಹಾಜರಿದ್ದರು. ಟೆಲಿಸ್ಕೋಪ್ ಮೂಲಕ ಚಂದ್ರ, ಗುರು, ನಕ್ಷತ್ರಗಳನ್ನು ಹರೋನಹಳ್ಳಿ ಸ್ವಾಮಿ ಅವರು ಸಾರ್ವಜನಿಕರಿಗೆ ತೋರಿಸಿದರು. ವೈಜ್ಞಾನಿಕ ವಿವರಣೆಗಳನ್ನು ಸಾರ್ವಜನಿಕರಿಗೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...