Monday, February 2, 2026
Monday, February 2, 2026

Thirthahalli Maarikamba Jathre ಮಾರ್ಚ್ 12 ರಿಂದ ತೀರ್ಥಹಳ್ಳಿ ಶ್ರೀಮಾರಿಕಾಂಬ ಜಾತ್ರೆ

Date:

Thirthahalli Maarikamba Jathre ತೀರ್ಥಹಳ್ಳಿ ಪಟ್ಟಣದ ಮಾರಿಕಾಂಬಾ ಜಾತ್ರೆ ಮಾರ್ಚ್ 12 ರಿಂದ 20 ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ,ಕ್ರೀಡಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗರಾಜ ಶೆಟ್ಟಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಸಲದ ಜಾತ್ರೆಯ ವಿಶೇಷವೆಂದರೆ ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಮಾರ್ಚ್ 14 ರಿಂದ 17 ರ ವರೆಗೆ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ರಾಷ್ಟ್ರೀಯ ಮಟ್ಟದ ಖೋ ಖೋ ಪಂದ್ಯಾವಳಿಯು ಎ.ಪಿ.ಎಂ.ಸಿ. ಪಕ್ಕದಲ್ಲಿ ನಿರ್ಮಿಸಲಾಗಿರುವ ಕ್ರೀಡಾಂಗಣದಲ್ಲಿ ಜರುಗಲಿದೆ ಎಂದರು.

ಮಾರ್ಚ್ 12ರಂದು ಜಾತ್ರೆ ಸಾರುವುದರೊಂದಿಗೆ ಆರಂಭಗೊಳ್ಳಲಿದ್ದು,ಮಾ.13ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಸಂಜೆ ೬ಕ್ಕೆ ತೀರ್ಥಹಳ್ಳಿ ನೃತ್ಯ ಕಲಾವಿದರಿಂದ ನೃತ್ಯ ಸಂಭ್ರಮ ನಂತರ ಕಲ್ಲಡ್ಕ ವಿಠ್ಠಲ ನಾಯಕ್ ತಂಡದಿಂದ ಗೀತಾ ಸಾಹಿತ್ಯ ಸಂಭ್ರಮ ಆಯೋಜಿಸಲಾಗಿದೆ. ಮಾ.14ರಂದು ಸಂಜೆ 7 ಕ್ಕೆ ಪ್ರೊ.ಕೃಷ್ಣೇಗೌಡ ಮೈಸೂರು ಸಂಗಡಿಗರಿಂದ ನಗೆ ನೈವೇದ್ಯ,ಮಾ.15ರ ಸಂಜೆ 7ಕ್ಕೆ ಮಂಗಳೂರಿನ ಸುಪ್ರೀತ್ ಸಫಲಿಗ ಬಳಗದಿಂದ ಸಂಗೀತ ಸೌರಭ ಕಾರ್ಯಕ್ರಮ, ಮಾ.16ರ ಸಂಜೆ ಅಂತರರಾಷ್ಟ್ರೀಯ ಜನಪದ ಕಲಾವಿದೆ ಸವಿತಾ ಗಣೇಶ್ ಪ್ರಸಾದ್ ಅರ್ಪಿಸುವ ಸವಿತ್ತಕ್ಕನ ಅಳ್ಳಿ ಬ್ಯಾಂಡ್ ತಂಡದ ಸಂಗೀತ ರಸಸಂಜೆ ನಡೆಯಲಿದೆ ಎಂದರು.

ಮಾ.17ರಂದು ತೀರ್ಥಹಳ್ಳಿ ಮೂಲದ ಬೆಂಗಳೂರಿನಲ್ಲಿ ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರ ನೃತ್ಯ ವೈಭವ ಹಾಗೂ ಮಾ.18ರಂದು ಸಂಜೆ ಯಕ್ಷ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಪಾವಂಜೆ ಯಕ್ಷಗಾನ ಮೇಳ ಪ್ರಸ್ತುತ ಪಡಿಸುವ ಪ್ರೊ.ಪವನ್ ಕಿರಣ್ಕೆರೆ ವಿರಚಿತ ಅಯೋಧ್ಯಾ ದೀಪ ಯಕ್ಷಗಾನ ನಡೆಯಲಿದೆ .

ಮಾ.18ರಂದು ರಾತ್ರಿ ಎಣ್ಣೆ ಭಂಡಾರ ಪೂಜೆ,ಮಾ.19ರ ಬೆಳಿಗ್ಗೆ 5ಕ್ಕೆ ಗೊಂಬೆ ಪೂಜೆ ,ಮಧ್ಯಾಹ್ನ 3ರಿಂದ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾನದಿಯಲ್ಲಿ ಗೊಂಬೆ ವಿಸರ್ಜನೆ ನಡೆಯಲಿದೆ ಎಂದರು.

Thirthahalli Maarikamba Jathre ಸಾಂಸ್ಕೃತಿಕ ಕಾರ್ಯಕ್ರಮಗಳು ದೇವಾಲಯದ ಮುಂಭಾಗದ ವೇದಿಕೆಯಲ್ಲಿ ಹಾಗೂ ಅನ್ನಸಂತರ್ಪಣೆಯು ಸುವರ್ಣ ಸಹಕಾರ ಭವನದಲ್ಲಿ ನಡೆಯಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...