Wednesday, October 2, 2024
Wednesday, October 2, 2024

DC Shivamogga ಶಿವಮೊಗ್ಗ ವಿದ್ಯಾನಗರ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯ

Date:

DC Shivamogga ವಿದ್ಯಾನಗರದ 14 ನೇ ವಾರ್ಡಿನಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

14ನೇ ವಾರ್ಡಿನ ವಿದ್ಯಾನಗರ ಹಾಗೂ ಹೊಳೆಹೊನ್ನೂರು ರಸ್ತೆ ಈ ಭಾಗದಲ್ಲಿ ಮೇಲೆತುವೆ ನಿರ್ಮಾಣವಾಗಿದೆ. ಆದರೆ, ಈ ಕಾಮಗಾರಿ ಟೆಂಡರ್‌ನಲ್ಲಿಯೇ ಶಾಂತಮ್ಮ ಬಡಾವಣೆ, ಹೊಳೆಹೊನ್ನೂರು ರಸ್ತೆ, ಗರುಡ ಲೇಔಟ್ ಈ ಭಾಗದ ಸ್ಥಳೀಯರಿಗೆ ದಿನನಿತ್ಯ ಓಡಾಟಕ್ಕೆ ಅನುಕೂಲವಾಗುವಂತೆ ಕೆಳ ಸೇತುವೆಯನ್ನು ಗುರುಪುರ, ನಿರ್ಮಾಣ ಮಾಡಬೇಕು ಎಂದು ಮನವಿದಾರರು ಆಗ್ರಹಿಸಿದರು.
ಕೆಳಸೇತುವೆಗೆ ಸಂಬಂಧಿಸಿದಂತೆ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ಆದರೆ ರೈಲ್ವೆ ಇಲಾಖೆ ಈ ಕಾಮಗಾರಿಯನ್ನು ಕೈಬಿಟ್ಟಿದೆ. ಇದರಿಂದ ಈ ಭಾಗದ ಜನರಿಗೆ ದಿನನಿತ್ಯ ಸಂಚಾರಕ್ಕೆ ತುಂಬ ತೊಂದರೆಯಾಗುತ್ತದೆ. ಆದ್ದರಿಂದ ತಕ್ಷಣವೇ ಕೆಳಸೇತುವೆಯನ್ನು ನಿರ್ಮಾಣ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಂದರ್ಭದಲ್ಲಿ ಪ್ರಮುಖರಾದ ರಂಗೇಗೌಡ, ಸತೀಶ್, ವಾಹಬ್ ಸಾಬ್, ವೆಂಕಟೇಶ್, ಮೋಹನ್. ಅಲ್ತಾಬ್, ಸುರೇಶ್, ಸಿದ್ದಣ್ಣ, DC Shivamogga ಶಾಂತಮ್ಮ, ಸಲೀಮ್, ರಾಜಶೇಖರ್, ಸೈಯ್ಯದ್ ಅಹಮ್ಮದ್, ಬೇಬಿ, ರಾಜು, ವೆಂಕಟೇಶ, ಲಕ್ಷ್ಮೀಕಾಂತ್ ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...