Thursday, March 19, 2026
Thursday, March 19, 2026

Protest ಕುಡಿಯುವ ನೀರಿನಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ- ಪ್ರತಿಭಟನೆ

Date:

Protest ಅಬ್ಬಲಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೋಜಪ್ಪನ ಹೊಸೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮತ್ತು ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಖಾಲಿ ಕೊಡ ಮುಂದಿಟ್ಟುಕೊಂಡು ಮಹಿಳೆಯರು ಮತ್ತು ಸಂಘಟನೆಯವರು ಶುದ್ಧ ಕುಡಿಯುವ ನೀರಿಗಾಗಿ ಮತ್ತು ಬಾಕ್ಸ್ ಚರಂಡಿ ನಿರ್ಮಿಸಲು ಆಗ್ರಹಿಸಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ, ಫ್ಲೈ ಓವರ್ ಗಳಂತಹ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.‌ ಆದರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ ಎಂದು ಬೇಸರಿಸಿದರು.

ಮೋಜಪ್ಪನ ಹೊಸೂರು ಗ್ರಾಮದಲ್ಲಿ 300 ಮನೆಗಳಿದ್ದು ಕುಡಿಯುವ ನೀರಿಗಾಗಿ ಬೇರೆ ಬೇರೆ ಗ್ರಾಮಗಳಿಗೆ ತೆರಳಿ ಹೊತ್ತು ತರಬೇಕಿದೆ. ಅಧಿಕ ಮಳೆಯಾದಲ್ಲಿ ಮಳೆ ನೀರು ಹರಿದು ಹೋಗಲು ಬಾಕ್ಸ್ ಚರಂಡಿ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಹಲವು ಬಾರಿ ಪಿಡಿಒಗೆ ಮನವಿ ನೀಡಿದರೂ ಯಾವ ಪ್ರಯೋಜನವಾಗಿಲ್ಲ ಎಮದು ಹೇಳಿದರು.

Protest ವೇದಿಕೆ ಅಧ್ಯಕ್ಷ ಎಂ ಮುಕ್ಬೂಲ್ ಅಹಮದ್, ಗ್ರಾಮಾಂತರ ಘಟಕದ ಅಧ್ಯಕ್ಷ, ಹಬೀಬುಲ್ಲ, ದಾದಾ ಖಲಂದರ್, ಇಮ್ತೀಯಾಜ್ ಖಾನ್, ನಗರ ಅಧ್ಯಕ್ಷ ರಾಮಕೃಷ್ಣ, ಗೌಸ್ ಫೀರ್, ಅನ್ಸರ್ ಪಾಶಾ, ಸಯ್ಯದ ಜಬೀರ್, ತುಳಸಮ್ಮ, ಮುಬೀನಾ ಕೌಸರ್, ಹಾಗೂ ಗ್ರಾಮಸ್ಥರು ಉಪಸ್ಥಿತರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...