Friday, March 20, 2026
Friday, March 20, 2026

Nitin Gadkari ರಸ್ತೆ ಅಗಲೀಕರಣ ಕಡಿತಲೆ ಮರಗಳ ಬದಲಿಗೆ ಸಸಿ ಬೆಳೆಸುವ ವೆಚ್ಚವನ್ನೂ ರಸ್ತೆ ನಿರ್ಮಾಣ ಬಜೆಟ್ ಗೆ ಸೇರಿಸಲು ಮನವಿ

Date:

Nitin Gadkari ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಹೆದ್ದಾರಿ ಅಗಲೀಕರಣ ವೇಳೆಯಲ್ಲಿ ಅನಿವಾರ್ಯವಾಗಿ ತೆರವುಗೊಳಿಸುವ ಮರಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೂಚಿಸಿರುವ ಪರ್ಯಾಯ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ತೆರವುಗೊಳಿಸುವ ಮರಗಳ ಬದಲಿಗೆ ನಿಗದಿತ ಸಂಖ್ಯೆಗಳ ಗಿಡಗಳನ್ನು ನೆಟ್ಟು ಅವುಗಳನ್ನು ಐದು ವರ್ಷಗಳ ಕಾಲ ಆರೈಕೆ ನಿರ್ವಹಣೆ ಜವಾಬ್ದಾರಿ ಕಾರ್ಯವನ್ನು ರಸ್ತೆ ಅಗಲೀಕರಣ ಮೂಲ ಯೋಜನೆ ವೆಚ್ಚದಲ್ಲಿ ಸೇರಿಸಿ ಕಾರ್ಯಗತ ಮಾಡಬೇಕು.
ಈ ವಿಚಾರದಲ್ಲಿ ಸಂಬಂಧ ಪಟ್ಟ ಇಲಾಖೆಗಳ ನಡುವೆ ಸಮನ್ವಯ ಕೊರತೆ ಇರದಂತೆ ನೋಡಿಕೊಳ್ಳಬೇಕು ಎಂದು ಪರಿಸರ ಪ್ರೇಮಿಗಳು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅನೇಕ ರಸ್ತೆಗಳ ಅಗಲೀಕರಣ ಕಾರ್ಯ ಯೋಜನೆ ಇರುವ ಬಗ್ಗೆ ತಿಳಿದುಬಂದಿದ್ದು, ಪಶ್ಚಿಮ ಘಟ್ಟದ ಅಪರೂಪದ ಸಸ್ಯ ಸಂಕುಲಗಳ ಸಂರಕ್ಷಣೆ ಅತ್ಯಗತ್ಯವಾಗಿದೆ. ಬದಲಿ ಗಿಡಗಳ ನೆಡುವಿಕೆಯಲ್ಲಿ ಇಂತಹ ಸ್ಥಳೀಯ ಜಾತಿಯ ಗಿಡಗಳನ್ನೇ ಬೆಳೆಸಬೇಕು. ಮಲೆನಾಡಿನ ಎಲ್ಲಾ ಹೆದ್ದಾರಿಗಳನ್ನು ಹಸಿರು ರಾಜಮಾರ್ಗವಾಗಿ ಪರಿಗಣಿಸಲು ಮತ್ತು ರಸ್ತೆ ನಿರ್ಮಿಸುವಾಗ ನದಿ ದಡ, ಕೆರೆ, ದಟ್ಟ ಅರಣ್ಯ, ನೀರಿನ ಮೂಲಗಳನ್ನು ಸಂರಕ್ಷಿಸುವಂತೆ ವಿನಂತಿಸಲಾಯಿತು.

Nitin Gadkari ಸಚಿವರ ಇಂದಿನ ಭೇಟಿ ವೇಳೆ ಪರಿಸರ ಕಾರ್ಯಕರ್ತರಾದ ಎಂ. ಶಂಕರ್, ಡಾ. ಶ್ರೀಪತಿ ಎಲ್.ಕೆ., ಬಾಲಕೃಷ್ಣ ನಾಯ್ಡು, ದಿನೇಶ್ ಶೇಟ್, ಅಜೇಯ್ ಕುಮಾರ ಶರ್ಮ, ಶ್ರವಣ್, ನವ್ಯಶ್ರೀ ನಾಗೇಶ್, ತ್ಯಾಗರಾಜ ಮಿತ್ಯಾಂತ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...