Wednesday, October 2, 2024
Wednesday, October 2, 2024

Seethanadi Falls ಈಜಲು ಬಾರದೇ ಸೀತಾನದಿಯಲ್ಲಿ ಸಾವಿಗೀಡಾದ ಈರ್ವರು ನತದೃಷ್ಟರು

Date:

Seethanadi Falls ಪ್ರವಾಸಕ್ಕೆಂದು ಹೆಬ್ರಿಗೆ ತೆರಳಿದ್ದ ಯುವಕ ತಂಡದ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಘಟನೆಯಲ್ಲಿ ಓರ್ವರು ಶಿವಮೊಗ್ಗದವರು ಇನ್ನೊಬ್ಬರು ಕೊಪ್ಪ ದ ಡಾಕ್ಟರ್​ ಸಾವನ್ನಪ್ಪಿದ್ದಾರೆ
ಸೋಮೇಶ್ವರ ಸಮೀಪ ಸೀತಾನದಿಯಲ್ಲಿ ಈ ಘಟನೆ ನಡೆದಿದೆ.ಹೆಬ್ರಿಯ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ಘಟನೆ ಸಂಭವಿಸಿದ್ದು, ಈಜಲು ಬಾರದೇ ನೀರಿಗೆ ಇಳಿದಿದ್ದು ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಮೃತರನ್ನು ಡಾ.ದೀಪಕ್ ಕೊಪ್ಪ ಮತ್ತು ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ದೀಪಕ್ ಶೃಂಗೇರಿ ವೈದ್ಯರಾಗಿದ್ದಾರೆ. ಶೈನು ಶಿವಮೊಗ್ಗದಲ್ಲಿ ವ್ಯವಹಾರ ಮಾಡಿಕೊಂಡಿದ್ದಾರೆ.
ಡಾ| ವಿನ್ಸೆಂಟ್‌ ಎಂ.ಸಿ. ಮೋಹನ್‌ ಜತೆಗೆ ಶಿವಮೊಗ್ಗದ ಶೈನು ಡೇನಿಯಲ್​ ಪ್ರವಾಸಕ್ಕೆ ಅಂತಾ ಹೆಬ್ರಿಗೆ ಬಂದಿದ್ದರು ಈ ಕಡೆ ಮಣಿಪಾಲ್​ ನಿಂದ ದೀಪಕ್​ ಇಬ್ಬರನ್ನ ಸೇರಿಕೊಂಡಿದ್ದರು, ಹೆಬ್ರಿಯಲ್ಲಿ ಊಟ ಮುಗಿಸಿ ಸೋಮೇಶ್ವರಕ್ಕೆ ತೆರಳಿದ ಮೂವರು ಸೀತಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಶೈನು ನೀರಿಗಿಳಿಯುತ್ತಾ ಮುಂದಕ್ಕೆ ಸಾಗಿದ್ದಾರೆ. ಅವರು ಆಯತಪ್ಪಿದ್ದನ್ನ ನೋಡಿದ ದೀಪಕ್ ನೀರಿಗೆ ಹಾರಿದ್ದಾರೆ. ಇಬ್ಬರು ಸಹ ನೀರಿನಲ್ಲಿ ಮುಳುಗಲು ಆರಂಭಿಸಿದ್ದಾರೆ. ಇದನ್ನ ಗಮನಿಸಿದ ವಿನ್ಸೆಂಟ್ ಕೂಡ ನೀರಿಗೆ Seethanadi Falls ಹಾರಿದ್ದು, ಅವರಿಗೂ ಈಜು ಬರುತ್ತಿರಲಿಲ್ಲ. ಕೊನೆಗೆ ಮರದ ಬೇರು ಹಿಡಿದು ಜೀವ ಉಳಿಸಿಕೊಮಡಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಹೆಬ್ರಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...