Sunday, May 3, 2026
Sunday, May 3, 2026

Seethanadi Falls ಈಜಲು ಬಾರದೇ ಸೀತಾನದಿಯಲ್ಲಿ ಸಾವಿಗೀಡಾದ ಈರ್ವರು ನತದೃಷ್ಟರು

Date:

Seethanadi Falls ಪ್ರವಾಸಕ್ಕೆಂದು ಹೆಬ್ರಿಗೆ ತೆರಳಿದ್ದ ಯುವಕ ತಂಡದ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಘಟನೆಯಲ್ಲಿ ಓರ್ವರು ಶಿವಮೊಗ್ಗದವರು ಇನ್ನೊಬ್ಬರು ಕೊಪ್ಪ ದ ಡಾಕ್ಟರ್​ ಸಾವನ್ನಪ್ಪಿದ್ದಾರೆ
ಸೋಮೇಶ್ವರ ಸಮೀಪ ಸೀತಾನದಿಯಲ್ಲಿ ಈ ಘಟನೆ ನಡೆದಿದೆ.ಹೆಬ್ರಿಯ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ಘಟನೆ ಸಂಭವಿಸಿದ್ದು, ಈಜಲು ಬಾರದೇ ನೀರಿಗೆ ಇಳಿದಿದ್ದು ಘಟನೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಮೃತರನ್ನು ಡಾ.ದೀಪಕ್ ಕೊಪ್ಪ ಮತ್ತು ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ದೀಪಕ್ ಶೃಂಗೇರಿ ವೈದ್ಯರಾಗಿದ್ದಾರೆ. ಶೈನು ಶಿವಮೊಗ್ಗದಲ್ಲಿ ವ್ಯವಹಾರ ಮಾಡಿಕೊಂಡಿದ್ದಾರೆ.
ಡಾ| ವಿನ್ಸೆಂಟ್‌ ಎಂ.ಸಿ. ಮೋಹನ್‌ ಜತೆಗೆ ಶಿವಮೊಗ್ಗದ ಶೈನು ಡೇನಿಯಲ್​ ಪ್ರವಾಸಕ್ಕೆ ಅಂತಾ ಹೆಬ್ರಿಗೆ ಬಂದಿದ್ದರು ಈ ಕಡೆ ಮಣಿಪಾಲ್​ ನಿಂದ ದೀಪಕ್​ ಇಬ್ಬರನ್ನ ಸೇರಿಕೊಂಡಿದ್ದರು, ಹೆಬ್ರಿಯಲ್ಲಿ ಊಟ ಮುಗಿಸಿ ಸೋಮೇಶ್ವರಕ್ಕೆ ತೆರಳಿದ ಮೂವರು ಸೀತಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಶೈನು ನೀರಿಗಿಳಿಯುತ್ತಾ ಮುಂದಕ್ಕೆ ಸಾಗಿದ್ದಾರೆ. ಅವರು ಆಯತಪ್ಪಿದ್ದನ್ನ ನೋಡಿದ ದೀಪಕ್ ನೀರಿಗೆ ಹಾರಿದ್ದಾರೆ. ಇಬ್ಬರು ಸಹ ನೀರಿನಲ್ಲಿ ಮುಳುಗಲು ಆರಂಭಿಸಿದ್ದಾರೆ. ಇದನ್ನ ಗಮನಿಸಿದ ವಿನ್ಸೆಂಟ್ ಕೂಡ ನೀರಿಗೆ Seethanadi Falls ಹಾರಿದ್ದು, ಅವರಿಗೂ ಈಜು ಬರುತ್ತಿರಲಿಲ್ಲ. ಕೊನೆಗೆ ಮರದ ಬೇರು ಹಿಡಿದು ಜೀವ ಉಳಿಸಿಕೊಮಡಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಹೆಬ್ರಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...