Tuesday, December 16, 2025
Tuesday, December 16, 2025

Pankaj Udhas “ಚಿಟ್ಟಿ ಆಯಿ ಹೈ ” ಗೀತೆ ಹಾಡಿ ರಸಿಕರ ಹೃದಯಗೆದ್ದ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

Date:

Pankaj Udhas ನಟ ಕಿಚ್ಚಾ ಸುದೀಪ್ ಅಭಿನಯದ ಚೊಚ್ಚಲ ‘ಸ್ಪರ್ಶ’ ಚಿತ್ರದ ‘ಚೆಂದಕ್ಕಿಂತ ಚೆಂದ ನೀನೆ ಸುಂದರ’ ಗೀತೆಯ ಗಾಯಕ ಪಂಕಜ್ ಉಧಾಸ್ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗಾಯಕ ಪಂಕಜ್ ಉಧಾಸ್ ಅವರು, ಇಂದು ನಿಧನರಾಗಿದ್ದು, ಅವರಿಗೆ 72 ವರ್ಷವಾಗಿತ್ತು. ಪಂಕಜ್‌ ಅವರ ನಿಧನದ ಮಾಹಿತಿಯನ್ನು ಅವರ ಕುಟುಂಬ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ‘ದೀರ್ಘಕಾಲದ ಅನಾರೋಗ್ಯದಿಂದ ಫೆಬ್ರುವರಿ 26, 2024ರಂದು ಪಂಕಜ್ ಉಧಾಸ್‌ ಅವರು ನಿಧನರಾದರು. ಅವರ ನಿಧನದ ಬಗ್ಗೆ ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಉಧಾಸ್ ಅವರು ಮೇ 17, 1951 ರಂದು ಗುಜರಾತ್‌ನ ಜೆಟ್‌ಪುರದಲ್ಲಿ ಜನಿಸಿದರು. ಪ್ರಸಿದ್ಧ ಗಾಯಕರೂ ಆಗಿದ್ದ ಅವರ ತಂದೆ ಮನುಭಾಯ್ ಉಧಾಸ್ ಅವರಿಂದ ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಪಾಠ ಕಲಿತರು. ಕಾಲೇಜಿನಲ್ಲಿ ಪದವಿ ಪಡೆದ ನಂತರ, ಪಂಕಜ್ ಬಾಲಿವುಡ್ ಚಲನಚಿತ್ರಗಳಿಗೆ ಹಿನ್ನೆಲೆ ಗಾಯನದಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಮುಂಬೈಗೆ ತೆರಳಿದರು. ಆದಾಗ್ಯೂ, ಅವರ ಅನನ್ಯವಾದ ಭಾವಪೂರ್ಣ ಧ್ವನಿಯು ಗಜಲ್ ಗಾಯನದಲ್ಲಿ ಅದರ ನಿಜವಾದ ಕರೆಯನ್ನು ಕಂಡುಕೊಂಡಿತು.
1980ರ ದಶಕದಲ್ಲಿ ಪಂಕಜ್​ ಉಧಾಸ್​ ಅವರು ಗಝಲ್​ ಗಾಯನದ ಮೂಲಕ ಫೇಮಸ್​ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ Pankaj Udhas ಕಾಲಿಟ್ಟರು. ಮಹೇಶ್ ಭಟ್ ಅವರ 1986 ರ ಕ್ರೈಮ್ ಥ್ರಿಲ್ಲರ್ ‘ನಾಮ್‌’ ಚಿತ್ರದ ‘ಚಿಟ್ಟಿ ಆಯಿ ಹೈ’ ಹಾಡು ಪಂಕಜ್‌ ಅವರ ಜನಪ್ರಿಯತೆಯನ್ನು ಹೆಚ್ಚಿಸಿತ್ತು. ಪಂಕಜ್‌ ಅವರು 2006ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ಹಿಂದಿ ಮಾತ್ರವಲ್ಲದೆ ಕನ್ನಡದಲ್ಲಿಯೂ ಹಿನ್ನೆಲೆ ಗಾಯಕರಾಗಿ ಪಂಕಜ್‌ ಹಾಡಿದ್ದಾರೆ. ಸ್ಪರ್ಶ ಚಿತ್ರದ ಬರೆಯದ ಮೌನ ಕವಿತೆ, ಚಂದಕ್ಕಿಂತ ಚಂದ ಹಾಡನ್ನು ಪಂಕಜ್‌ ಹಾಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...