Friday, March 20, 2026
Friday, March 20, 2026

Amrit Bharat Station scheme ಅಮೃತ್ ಭಾರತ್ ಸ್ಟೇಷನ್ ಯೋಜನೆಗೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಲೋಕಾರ್ಪಣೆ

Date:

Amrit Bharat Station scheme ಕೇಂದ್ರ ಸರ್ಕಾರ ದೇಶದಾದ್ಯಂತ ಸುಮಾರು 554 ರೈಲ್ವೇ ನಿಲ್ದಾಣಗಳನ್ನು ರೂ. 41,000 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಉನ್ನತಿಕರಿಸಲು ಜಾರಿಗೆ ತಂದಿರುವ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ “ಅಮೃತ್ ಭಾರತ್ ಸ್ಟೇಷನ್” ಯೋಜನೆಗೆ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ
ಅವರು ವರ್ಚುವಲ್ ಮುಖಾಂತರ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಉಪಸ್ಥಿತರಿದ್ದು ವರ್ಚುವಲ್ ಮೂಲಕ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಭಾಗವಹಿಸಿದ್ದರು.

ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ರೈಲ್ವೇ ನಿಲ್ದಾಣಗಳು ಈ ಯೋಜನೆಯಲ್ಲಿ ಸೇರಿದ್ದು, ಕ್ರಮವಾಗಿ ಶಿವಮೊಗ್ಗ ನಗರ 24.37 ಕೋಟಿ, ಸಾಗರ 26.44 ಕೋಟಿ ಮತ್ತು ತಾಳಗುಪ್ಪ 27.86 ಕೋಟಿ ಒಟ್ಟು 78.67 ಕೋಟಿ ಮೊತ್ತದ ಕಾಮಗಾರಿಗೆ ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು ಹಾಗೂ ಅರಸಾಳು ಬಳಿ ರೂ. 2.17 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ರಸ್ತೆ ಮೇಲ್ಸೇತುವೆ ರಾಷ್ಟ್ರಕ್ಕೆ ಸಮರ್ಪಿಸಿದರು.

Amrit Bharat Station scheme ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ ಅವರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಅವರು, ವಿಭಾಗ ಪ್ರಭಾರಿಗಳಾದ ಶ್ರೀ ಗಿರೀಶ್ ಪಟೇಲ್ ಅವರು, ಪ್ರಮುಖರಾದ ಶ್ರೀ ಮಹೇಶ್ ಅವರು, ಶ್ರೀ ನಾಗರಾಜ್ ಅವರು, ಶ್ರೀ ರತ್ನಾಕರ್ ಶೆಣೈ ಅವರು, ಶ್ರೀ ಭರ್ಮಪ್ಪ ಅವರು ಸೇರಿದಂತೆ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...