Monday, February 2, 2026
Monday, February 2, 2026

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗಿರುವ ತಂಬಾಕು ತಡೆ ಕಾಯಿದೆ ತಿದ್ದುಪಡಿ ಕೈ ಬಿಡಲು ಮನವಿ ಸಲ್ಲಿಕೆ

Date:

Street Vendors ಬೀದಿಬದಿ ವ್ಯಾಪಾರಿಗಳಿಗೆ ಹೊರೆಯಾಗುವ ತಂಬಾಕು ತಡೆ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಯನ್ನು ಕೈಬಿಡಬೇಕೆಂದು ಬೀದಿಬದಿ ವ್ಯಾಪಾರಿಗಳ ಸಂಘ ಮನವಿ ಮಾಡಿದೆ.
ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆಯಬೇಕೆಂದು ಶಾಸಕರಾದ ಶಾರದಾ ಪೂರ್ಯನಾಯ್ಕ್ ಮತ್ತು ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿರುವ ಸಂಘ, ಈಗಿರುವ ಕಾಯಿದೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಗೆ 200 ರೂ. ದಂಡ ವಿದಿಸಲಾಗುತ್ತದೆ. ರಾಜ್ಯ ಸರಕಾರ ಈಗ ಈ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಇದು ಜಾರಿಯಾದರೆ ದಂಡ ಶುಲ್ಕವನ್ನು ಒಂದು ಸಾವಿರ ರೂ.ಗೆ ಏರಿಸಲಾಗುತ್ತದೆ. ಇದರಿಂದ ರಾಜ್ಯದ ಲಕ್ಷಾಂತರ ಬೀದಿಬದಿ ಚಿಲ್ಲರೆ ವ್ಯಾಪಾರಿಗಳಿಗೆ ತೊಂದರೆಯಾಗುತ್ತದೆ. ಇದರಿಂದ ಚಿಲ್ಲರೆ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೊಳಗಾಗುತ್ತಾರೆ ಆದ್ದರಿಂದ ಸರಕಾರ ಈ ಬಗ್ಗೆ ಮರುಚಿಂತನೆ ಮಾಡಬೇಕು. ಶಾಸಕರುಗಳು ನಮ್ಮ ಪರವಾಗಿ ಶಾಸನಸಭೆಯಲ್ಲಿ ವಾದಮಂಡಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
Street Vendors ಚಿಲ್ಲರೆ ವ್ಯಾಪಾರಿಗಳ ಸಂಘದ ಪರವಾಗಿ, ಅನಿಲ್, ಶಾಮಣ್ಣ, ಕುಮಾರ್, ಅಲಿ ,ಕಲೀಮ್, ಜೈನ್, ಸುಧೀರ್, ಶೇಖರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...