Sunday, August 23, 2026
Sunday, August 23, 2026

Rajya Sabha Elections ರಾಜ್ಯಸಭೆ ಚುನಾವಣೆ ನಿರೀಕ್ಷೆಯಂತೆ ಕಾಂಗ್ರೆಸ್ 3 & ಬಿಜೆಪಿ 1 ಸ್ಥಾನ ಗೆಲುವು

Date:

Rajya Sabha Elections ರಾಜ್ಯಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ನ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್, ಜಿ.ಸಿ. ಚಂದ್ರಶೇಖರ್ ಮತ್ತು ಬಿಜೆಪಿಯ ನಾರಾಯಣಸಾ ಭಾಂಡಗೆ ಗೆಲುವು ಸಾಧಿಸಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್‌ನ ಡಿ. ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ.

223 ಶಾಸಕರ ಪೈಕಿ ಬಿಜೆಪಿಯ ಅರಬೈಲ್ ಶಿವರಾಂ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದರು.
ಒಟ್ಟು 222 ಶಾಸಕರು ಮತ ಚಲಾಯಿಸಿದ್ದರು.

ಅಜಯ್ ಮಾಕನ್, ನಾಸೀರ್ ಹುಸೇನ್ ಮತ್ತು ನಾರಾಯಣ ಸಾ ಭಾಂಡಗೆ ತಲಾ 47 ಮತಗಳನ್ನು ಪಡೆದಿದ್ದಾರೆ. ಜಿ.ಸಿ. ಚಂದ್ರಶೇಖರ್ 45 ಮತ ಪಡೆದಿದ್ದಾರೆ.

ಕುಪೇಂದ್ರ ರೆಡ್ಡಿ 36 ಮತಗಳನ್ನು ಪಡೆಯಲಷ್ಟೇ ಸಾಧ್ಯವಾಗಿದೆ.
ಕಾಂಗ್ರೆಸ್‌ನ ಎಲ್ಲ ಶಾಸಕರೂ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ.

Rajya Sabha Elections ಪಕ್ಷೇತರರಾದ ಲತಾ ಮಲ್ಲಿಕಾರ್ಜುನ, ಕೆ.ಎಚ್. ಪುಟ್ಟಸ್ವಾಮಿ ಗೌಡ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಬಿಜೆಪಿಯ ಎಸ್.ಟಿ. ಸೋಮಶೇಖರ್ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ
ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...