Thursday, September 17, 2026
Thursday, September 17, 2026

K. Shivram ನಿವೃತ್ತ ಐಎಎಸ್ ಅಧಿಕಾರಿ, ಚಿತ್ರನಟಕೆ.ಶಿವರಾಂ ನಿಧನ

Date:

K. Shivram ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

K. Shivram 2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...