Saturday, April 26, 2025
Saturday, April 26, 2025

Report acceptance meeting ಸಾರ್ವಜನಿಕರು ಲೋಕಾಯುಕ್ತ ಕಾರ್ಯಾಲಯದ ಉಪಯೋಗ ಪಡೆಯಲು ಕರೆ

Date:

Report acceptance meeting ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲು ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಹಾಗೂ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ನೀಡಲು ಮುಂದೆ ಬರಬೇಕು ಎಂದು ಕರ್ನಾಟಕ ಲೋಕಾಯುಕ್ತ ಸಬ್ ಇನ್ಸ್‍ಪೆಕ್ಟರ್ ಸುರೇಶ್ ಹೆಚ್ ಎಸ್ ತಿಳಿಸಿದರು.
ಇಂದು ತಾಲ್ಲೂಕು ಪಂಚಯ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿದರು.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತವಾಗಿ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತಕ್ಕೆ ಅಹವಾಲು ಸಲ್ಲಿಸಬಹುದು. ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ನೀಡಿ ಕುಂದು ಕೊರತೆ ಸಭೆಗಳ ಉಪಯೋಗ ಪಡೆಯಬೇಕೆಂದರು.
Report acceptance meeting ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ಮಾತನಾಡಿ, ಸರ್ಕಾರಿ ಅಧಿಕಾರಿ/ನೌಕರರು ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಅರ್ಥ ಮಾಡಿಕೊಂಡು ನಿಗದಿತ ಅವಧಿಯೊಳಗೆ ಕರ್ತವ್ಯ ನಿರ್ವಹಿಸಿದಲ್ಲಿ ಸಮಸ್ಯೆಗಳು ಅಷ್ಟಾಗಿ ಉದ್ಭವಿಸುವುದಿಲ್ಲ. ಯಾರಿಗೂ ಹೆದರಿ ಕೆಲಸ ಮಾಡುವ ಅವಶ್ಯಕತೆ ಇಲ್ಲ. ಯಾವುದೇ ಹಣ, ಆಮಿಷಗಳಿಗೆ ಒಳಗಾಗದೇ ನಮ್ಮ ಕೆಲಸವನ್ನು ನಿಯಮಾನುಸಾರ ಸಕಾಲದಲ್ಲಿ ನಿರ್ವಹಿಸಿದರೆ ಸಾಕು. ಸರ್ಕಾರಿ ಕೆಲಸ ಪುಣ್ಯದ ಕೆಲಸವಾಗಿದ್ದು, ಪ್ರಾಮಾಣಿಕವಾಗಿ ಮಾಡೋಣ ಎಂದರು.
ಸಭೆಯಲ್ಲಿ ಕಳೆದ ಮಾಹೆಯಲ್ಲಿ ಸ್ವೀಕರಿಸಲಾದ 7 ಅರ್ಜಿಗಳ ಪೈಕಿ 6 ನ್ನು ವಿಲೇವಾರಿ ಮಾಡಲಾಯಿತು. ಇಂದಿನ ಸಭೆಯಲ್ಲಿ ಮಹಾನಗರ ಪಾಲಿಕೆ, ಕಂದಾಯ ಇಲಾಖೆ, ನೀರಾವರಿ ಇಲಾಖೆಗಳಿಗೆ ಸಂಬಂಧಿಸಿದ 6 ಅಹವಾಲುಗಳನ್ನು ಸ್ವೀಕರಿಸಲಾಯಿತು.
ಸಭೆಯಲ್ಲಿ ಶಿವಮೊಗ್ಗ ತಾಲ್ಲೂಕು ಇಓ ಅವಿನಾಶ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...